LATEST NEWS
ಮಹಿಳೆಯರ ಮೇಲಿನ ಶೋಷಣೆ ತಪ್ಪಿಸಲು ಬಲವಾದ ಕಾನೂನು ಅಗತ್ಯ ಇದೆ – ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ
ಮಂಗಳೂರು ಡಿಸೆಂಬರ್ 4 : ಮಹಿಳೆಯರ ಮೇಲಿನ ಶೋಷಣೆ ತಪ್ಪಿಸಲು ಬಲವಾದ ಕಾನೂನು ಅಗತ್ಯ ಇದೆ ಎಂದು ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಇವತ್ತಿನ ಪತ್ರಿಕೆಯೊಂದರಲ್ಲಿ ಮಹಿಳೆಯರೇ ಹುಷಾರ್ ಎಂಬ ಎಚ್ಚರಿಕೆಯೊಂದನ್ನು ನೀಡಲಾಗಿದೆ. ಇಂದು ಪುರುಷರಿಗಿಂತ ಅಧಿಕ ಸಂಖ್ಯೆಯಲ್ಲಿ ಮಹಿಳೆಯರು ವಂಚನೆಗೊಳಗಾಗುತ್ತಿದ್ದಾರೆ ಎಂಬುದನ್ನು ತೋರಿಸುತ್ತಿದೆ. ದೈಹಿಕ, ಆರ್ಥಿಕವಾಗಿ ಶೋಷಣೆಗೊಳಗಾಗುತ್ತಿದ್ದಾರೆ. ಆದ್ದರಿಂದ ಅನೇಕ ರಾಜ್ಯಗಳು ಕೈಗೊಂಡಿರುವ ಬಲವಾದ ಕಾನೂನಿನಂತೆ ನಮ್ಮ ರಾಜ್ಯವೂ ಕಾನೂನನ್ನು ರಚಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.
ಇನ್ನು ಅನೇಕ ಸಬೂಬುಗಳನ್ನು ಮುಂದಿಟ್ಟುಕೊಂಡು ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಲು ತಡೆ ತರಲಾಗುತ್ತಿದೆ. ಆದರೂ ಗೋಹತ್ಯೆ ನಿಷೇಧ ಕಾನೂನು ಶೀಘ್ರವಾಗಿ ಜಾರಿಯಾಗಬೇಕಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
You must be logged in to post a comment Login