Connect with us

DAKSHINA KANNADA

ಲವ್ ಜಿಹಾದ್‌ – ನೀವು ಇದಕ್ಕೆ ಬಲಿಯಾಗಬೇಡಿ – ಪುತ್ತೂರಿನಲ್ಲೊಂದು ಕಟೌಟ್

ಪುತ್ತೂರು ನವೆಂಬರ್ 23: ಪುತ್ತೂರಿನಲ್ಲಿ ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಒಂದು ಕಟೌಟ್ ಕಾಣಿಸಿಕೊಂಡಿದ್ದು ಲವ್ ಜಿಹಾದ್‌ – ನೀವು ಇದಕ್ಕೆ ಬಲಿಯಾಗಬೇಡಿ’ ಎಂಬ ಬ್ಯಾನರ್ ಒಂದನ್ನು ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಅರಣ್ಯ ಇಲಾಖೆಯ ಕಚೇರಿಯ ಎದುರು ಹಾಕಲಾಗಿದೆ.


ಹಿಂದೂ ಹುಡುಗಿ ಶ್ರದ್ಧಾಳ ಹತ್ಯೆ. ದೇಹವನ್ನು 35 ತುಂಡು ಮಾಡಿದರು. ಕಾರಣ ಲವ್ ಜಿಹಾದ್. ಇದಕ್ಕೆ ನೀವು ಬಲಿಯಾಗಬೇಡಿ’ ಎಚ್ಚರಿಸುವ ಕಟೌಟ್ ಅನ್ನು ವೈದ್ಯ, ಹಿಂದುತ್ವ ಪರ ಸಂಘಟನೆಗಳಲ್ಲಿ ಸಕ್ರಿಯರಾಗಿರುವ ಡಾ.ಎಂ.ಕೆ. ಪ್ರಸಾದ್ ಅವರ ಹೆಸರಿನಲ್ಲಿ ಅಳವಡಿಸಲಾಗಿದೆ.

ನಾನು ಯಾವುದೇ ಧರ್ಮ ಅಥವಾ ಸಮುದಾಯದ ವಿರುದ್ಧ ಅಲ್ಲ. ಆದರೆ, ನಮ್ಮ ಸುತ್ತಮುತ್ತಲ ಬೆಳವಣಿಗೆ ಬಗ್ಗೆ ಹದಿಹರೆಯದವರಿಗೆ ಅರಿವು ಇರಬೇಕು. ಬಣ್ಣದ ಆಮಿಷಗಳನ್ನು ಒಡ್ಡಿ ಏನೇನು ಮಾಡುತ್ತಾರೆ ಎಂಬುದೂ ಗೊತ್ತಿರಬೇಕು. ಅದಕ್ಕಾಗಿ ನಾನೇ ಈ ಫಲಕ ಹಾಕಿಸಿದ್ದೇನೆ. ಸ್ಥಳೀಯ ಎಲ್ಲ ಕಾಲೇಜುಗಳಿಗೂ ಭಿತ್ತಿಪತ್ರಗಳನ್ನು ಕಳುಹಿಸಿದ್ದೇನೆ. ಯಾವುದೇ ಸಂಘಟನೆ ಅಥವಾ ಸಂಘ–ಸಂಸ್ಥೆ ಪರವಾಗಿ ಮಾಡಿಲ್ಲ. ವೈಯಕ್ತಿಕ ಹೆಸರಿನಲ್ಲಿಯೇ ಕಳುಹಿಸಿದ್ದೇನೆ’ ಎಂದು ಡಾ.ಎಂ.ಕೆ. ಪ್ರಸಾದ್ ಪ್ರತಿಕ್ರಿಯಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *