Connect with us

    LATEST NEWS

    ಪೊಲೀಸ್ ಪ್ರೇಮ ಪ್ರಕರಣ – ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

    ಪೊಲೀಸ್ ಪ್ರೇಮ ಪ್ರಕರಣ – ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

    ಉಡುಪಿ ಫೆಬ್ರವರಿ 4: ಪೊಲೀಸ್ ಕಾನ್ಸ್ ಟೇಬಲ್ ಗಳ ಪ್ರೇಮ ಪ್ರಕರಣದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಲ್ಲೂರಿನಲ್ಲಿ ನಡೆದಿದೆ,

    ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಈ ಘಟನೆ ನಡೆದಿದ್ದು ನೇಣು ಬೀಗಿದು ಸಾವಿಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್. ಮೃತ ಪ್ರೇಮಿಯನ್ನು ನಾಗರಾಜ್ (27) ಎಂದು ಗುರುತಿಸಲಾಗಿದೆ.

    ಮೂಲತಃ ದಾವಣಗೆರೆಯ ಮಲೆಬೆನ್ನೂರು ಹಿಡನಗಟ ದವರಾದ ನಾಗರಾಜ್ ಕೊಲ್ಲೂರಿನಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದು. ಮತ್ತೊಬ್ಬ ಪೊಲೀಸ್ ಸಿಬ್ಬಂದಿ ರೇಷ್ಮಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದರು, ಇಬ್ಬರು ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಕಾನ್ಸ ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದು, ಒಂದೇ ಬ್ಯಾಚ್ ನ ಕಾನ್ಸ್ ಟೇಬಲ್ ಗಳಾಗಿದ್ದರು.

    ಕೊಲ್ಲೂರು ಸೌಪರ್ಣಿಕ ವಸತಿಗ್ರಹದಲ್ಲಿ ನಾಗರಾಜ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡರೆ, ರೇಷ್ಮಾ ಬಾವಿಯೊಂದಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರೇಷ್ಮಾಳನ್ನು ಪೊಲೀಸರು ರಕ್ಷಿಸಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ನಾಗರಾಜ್ ಮಾತ್ರ ಸಾವನಪ್ಪಿದ್ದಾರೆ.
    ಪೊಲೀಸ್ ಕಾನ್ಸ್ ಟೇಬಲ್ ನಾಗರಾಜ್ ಕಳೆದ 2 ವರ್ಷಗಳಿಂದ ಕೊಲ್ಲೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

    ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಪ್ರೇಮ ವೈಫಲ್ಯ, ಅಥವಾ ವೈಮನಸ್ಸು ಆತ್ಮಹತ್ಯೆ ಕಾರಣವಾಗಿತ್ತೇ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳ ಭೇಟಿ ನೀಡಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply