KARNATAKA
ಕತ್ತು ಕುಯ್ದುಕೊಂಡು ಆತ್ಮಹತ್ಯೆ ಯತ್ನಿಸಿದ ಪ್ರೇಮಿಗಳು
ಮೈಸೂರು ಜುಲೈ 9: ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿಗಳನ್ನು ಪೊಲೀಸರು ರಕ್ಷಿಸಿದ ಘಟನೆ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ.
ದುಗ್ಗಾಹಳ್ಳಿ ಗ್ರಾಮದ ಕಾವ್ಯ ಮತ್ತು ಕುರಿಹುಂಡಿ ಗ್ರಾಮದ ರವಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ. ದುಗ್ಗಾಹಳ್ಳಿ ಗ್ರಾಮದ ಕಾವ್ಯ ಮತ್ತು ಕುರಿಹುಂಡಿ ಗ್ರಾಮದ ರವಿ ಪರಸ್ಪರ ಪ್ರೀತಿಸುತ್ತಿದ್ದು, ಇಬ್ಬರ ಜಾತಿ ಬೇರೆ ಆಗಿದ್ದರಿಂದ ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನಲೆ ಇಂದು ದುಗ್ಗಹಳ್ಳಿಗೆ ಬಂದಿದ್ದ ರವಿ, ಯಾರು ಇಲ್ಲದ ವೇಳೆ ಕಾವ್ಯಾಳ ಮನೆಗೆ ಹೋಗಿದ್ದಾನೆ.
ಮದುವೆಗೆ ಪೋಷಕರ ವಿರೋಧದ ಹಿನ್ನೆಲೆ ಇಬ್ಬರು ಕತ್ತು ಕುಯ್ದುಕೊಂಡು ಮನೆಯ ಹೊರಗೆ ಬಂದು ಕುಳಿತಿದ್ದಾರೆ. ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಇಬ್ಬರನ್ನು ನೋಡಿದ ಸ್ಥಳೀಯರು ಕೂಡಲೇ ಪೊಲೀಸರು ಮತ್ತು ಅಂಬುಲೆನ್ಸ್ ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
You must be logged in to post a comment Login