Connect with us

    KARNATAKA

    ಶಿವಮೊಗ್ಗ – ಪೆಟ್ರೋಲ್ ಬಂಕ್ ಪಕ್ಕದಲ್ಲೇ ಸಿಲಿಂಡರ್ ಸ್ಪೋಟ

    ಶಿವಮೊಗ್ಗ ಅಗಸ್ಟ್ 21: ಬೇಕರಿಯೊಂದರಲ್ಲಿ ಅಗ್ನಿ ಅವಘಢ ಸಂಭವಿಸಿ ಸಿಲಿಂಡರ್ ಸ್ಪೋಟಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ಬುಧವಾರ ಸಂಭವಿಸಿದೆ.


    ಆಯನೂರಿನ ಹಣಗೆರೆ ರಸ್ತೆಯಲ್ಲಿರುವ ಎಸ್‌ಎಲ್‌ವಿ ಐಯ್ಯಾಂಗಾರ್‌ ಬೇಕರಿಯಲ್ಲಿ ದಿಢೀರ್‌ ಬೆಂಕಿ ಕಾಣಿಸಿಕೊಂಡಿದೆ ಈ ವೇಳೆ ಅಂಗಡಿಯಲ್ಲಿದ್ದವರು ಅಂಗಡಿಯಿಂದ ಹೊರ ಓಡಿ ಬಂದಿದ್ದಾರೆ ಈ ವೇಳೆ ಬೇಕರಿಯೊಳಗೆ ಇದ್ದ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ. ಈ ವೇಳೆ ಅಕ್ಕಪಕ್ಕದ ಅಂಗಡಿಯಲ್ಲಿದ್ದ ಜನ ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಬೆಂಕಿ ಅವಘಡ ಸಂಭವಿಸಿದ ಬೇಕರಿ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಇದ್ದು ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದು ದೊಡ್ಡ ಅನಾಹುತ ತಪ್ಪಿದಂತಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply