Connect with us

BANTWAL

ವಿಟ್ಲ ಪೊಲೀಸ್ ಕಾರ್ಯಾಚರಣೆ, LPG ಸಿಲಿಂಡರ್ ಕಳ್ಳರ ಬಂಧನ, 2.5 ಲಕ್ಷದ ಸಾಮಾಗ್ರಿ ವಶಕ್ಕೆ

ಬಂಟ್ವಾಳ :  ಇಬ್ಬರು ಗ್ಯಾಸ್  ಸಿಲಿಂಡರ್ ಕಳ್ಳರನ್ನು ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು‌ ಹಳೆಕೋಟೆ ನಿವಾಸಿ ಇಮ್ತಿಯಾಝ್‌ (38) ಬಂಧಿತ ಆರೋಪಿಗಳು.

ಮಿತ್ತೂರು ಮತ್ತು ಕೊಡಾಜೆ ಎಂಬಲ್ಲಿ ಮನೆಯಿಂದ ಅನಿಲ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ವಸ್ತುಗಳ ಕಳ್ಳತನ ನಡೆದಿತ್ತು. ಕಳವು ಪ್ರಕರಣಗಳ ಪತ್ತೆಯಲ್ಲಿ ತೊಡಗಿದ್ದ ವಿಟ್ಲ ಠಾಣಾ ಅಪರಾಧ ತಂಡದ ಸಿಬ್ಬಂದಿಗಳು ಮಾಣಿ ಗ್ರಾಮದ ಮಾಣಿ ಜಂಕ್ಷನ್ ನಲ್ಲಿ ಆಟೋ ರಿಕ್ಷಾ ಸಹಿತ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದರು. ವಿಟ್ಲ ಠಾಣೆಯ ಮಿತ್ತೂರು, ಕೊಡಾಜೆ ಮನೆ ಕಳವು ಎರಡು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿ ಕಳವು ಎರಡು ಪ್ರಕರಣಗಳಲ್ಲಿ ಭಾಗಿಯಾಗಿವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 1.35 ಲಕ್ಷ ರೂ. ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಅಟೊ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2.50 ಲಕ್ಷ ರೂ ಎಂದು ಅಂದಾಜಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *