LATEST NEWS
ಬೆಂಕಿಯ ಕೆನ್ನಾಲಿಗೆ ಐಷಾರಾಮಿ ಖಾಸಗಿ ಬಸ್ ಭಸ್ಮ ; ಓರ್ವ ಸಜೀವ ದಹನ..!
ನಲ್ಲಗೊಂಡ : ಖಾಸಗಿ ಟ್ರಾವೆಲ್ಸ್ ಗೆ ಸೇರಿದ ಐಷಾರಾಮಿ ಬಸ್ ಭಸ್ಮಗೊಂಡ ಘಟನೆ ಆಂಧ್ರ ಪ್ರದೇಶದ ನಲ್ಲಗೊಂಡ-ಮರಿಗೂಡ (Nalgonda) ಬೈಪಾಸ್ ರಸ್ತೆ ಬಳಿ ಸಂಭವಿಸಿದೆ.
ಶಾಕ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿಗೆ ಆಹುತಿಯಾದ ಬಸ್ ಶ್ರೀ ಕೃಷ್ಣ ಟ್ರಾವೆಲ್ಸ್ ಗೆ ಎಂಬ ಖಾಸಾಗಿ ಕಂಪೆನಿಗೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ. ದುರ್ಘಟನೆಯಲ್ಲಿ ಒಬ್ಬ ಪ್ರಯಾಣಿಕ ಪ್ರಾಣ ಕಳೆದುಕೊಂಡಿದ್ದರೆ, ದುರ್ಘಟನೆ ಸಂದರ್ಭ ಬಸ್ಸಿನಲ್ಲಿ 40 ಪ್ರಯಾಣಿಕರಿದ್ದರು ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ವಸ್ತುಗಳು, ಪ್ರಮುಖ ದಾಖಲೆಗಳು ಸುಟ್ಟು ಕರಕಲಾಗಿದೆ. ಸಹಾಯಕ್ಕಾಗಿ ಮೂರು ಗಂಟೆಗಳ ಕಾಲ ರಸ್ತೆಯಲ್ಲಿ ಪ್ರಯಾಣಿಕರು ಪರದಾಡಿದ್ದೂ, ಬಸ್ ಮಾಲೀಕರು ಪ್ರಯಾಣಿಕರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಬಸ್ಸಿನಲ್ಲಿದ್ದವರು ದೂರಿದ್ದಾರೆ. ಹೈದರಾಬಾದ್ನಿಂದ ಚಿರಾಲಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಅಪಘಾತ ಸಂಭವಿಸಿದೆಯೇ ಅಥವಾ ಚಾಲಕ ಮತ್ತು ಟ್ರಾವೆಲ್ಸ್ ಮಾಲೀಕರ ತಪ್ಪೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
You must be logged in to post a comment Login