Connect with us

    KARNATAKA

    ಮಡಿಕೇರಿ: ಎಸ್‌ಪಿ ಕಛೇರಿಯಲ್ಲೇ 16.96 ಲಕ್ಷ ನಾಪತ್ತೆ?

    ಮಡಿಕೇರಿ, ಜುಲೈ 11: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಖಜಾನೆಯನ್ನೇ ಲೂಟಿ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

    ಹಣ ಕಳವಾಗಿರುವ ಬಗ್ಗೆ ಎಸ್‍ಪಿಗೆ ನಗದು ಶಾಖೆಯ ವಿಷಯ ನಿರ್ವಾಹಕ ಬರೆದಿರುವ ಪತ್ರ ಬಹಿರಂಗವಾಗಿದೆ. ಕೊಡಗು ಪೊಲೀಸ್ ಇಲಾಖೆಗೆ ವಿವಿಧ ಮೂಲಗಳಿಂದ ಸಂಗ್ರಹವಾಗಿದ್ದ 16.96 ಲಕ್ಷ ರೂಪಾಯಿ ಹಣವನ್ನು ಎಸ್ಪಿ ಕಚೇರಿಯ ಖಜಾನೆಯಿಂದ ಲೂಟಿ ಮಾಡಲಾಗಿದೆ. ಪೊಲೀಸ್ ಸಿಬ್ಬಂದಿಯೇ ಕಳ್ಳತನ ಮಾಡಿದ್ದಾರೆ ಎಂಬ ಅನುಮಾನ ಸಹ ವ್ಯಕ್ತವಾಗುತ್ತಿರುವುದು ಅಚ್ಚರಿಯ ಸಂಗತಿಯಾಗಿದೆ.

    2020-21ನೇ ಸಾಲಿನಲ್ಲಿ ಪೊಲೀಸ್ ಫ್ಲ್ಯಾಗ್ ಮಾರಾಟದಿಂದ 7,38,450 ರೂಪಾಯಿ ಸಂಗ್ರಹವಾಗಿತ್ತು. ಜೊತೆಗೆ ಕೊವಿಡ್ ನಿಯಮಗಳನ್ನು ಉಲ್ಲಂಘಿಸಿದವರಿಗೆ ದಂಡ ಹಾಕಿದ್ದ 9,28,000 ರೂಪಾಯಿ ಸಂಗ್ರಹವಾಗಿತ್ತು. ಈ ಹಣವನ್ನು ಪೊಲೀಸ್ ವರಿಷ್ಠಾಧಿಕಾರಿ ಅವರ ನಗದು ಶಾಖೆಯ ಖಜಾನೆಯಲ್ಲಿ ಇರಿಸಲಾಗಿತ್ತು. ಈ ಹಣವನ್ನು ಸಂದಾಯ ಮಾಡುವುದಕ್ಕಾಗಿ ಖಜಾನೆ ಬೀಗ ತೆಗೆಯಲು ಹೋದಾಗ ಹಣ ಕಳುವಾಗಿರುವುದು ಬೆಳಕಿಗೆ ಬಂದಿದೆ.

    ನಗದು ಶಾಖೆಯ ವಿಷಯ ನಿರ್ವಾಹಕ ರಂಜಿತ್ ಕುಮಾರ್ ಅವರು ಈ ಹಣವನ್ನು ಖಜಾನೆಯಲ್ಲಿಟ್ಟಿದ್ದರಂತೆ. ಮೊನ್ನೆಯಷ್ಟೇ ಹಣವನ್ನು ಸರ್ಕಾರಕ್ಕೆ ಸಂದಾಯ ಮಾಡಲು ಖಜಾನೆ ಬಾಗಿಲು ತೆಗೆಯುವುದಕ್ಕೆ ಹೋಗಿದ್ದಾರೆ. ಈ ವೇಳೆ ಅದರ ಬೀಗ ತೆಗೆದಿರುವುದು ಗೊತ್ತಾಗಿದೆ. ಡೋರ್ ತೆಗೆದು ನೋಡಿದಾಗ ಹಣ ಕಳವಾಗಿರುವುದು ತಿಳಿದಿದೆ. ಹೀಗಾಗಿ ರಂಜಿತ್ ಕುಮಾರ್ ಅವರು ಎಸ್ಪಿಗೆ ಪತ್ರ ಬರೆದಿದ್ದಾರೆ.

    ಈ ನಗದು ಕಳವು ಮಾಡಿರುವುದರ ಹಿಂದೆ ಎಸ್ಪಿ ಕಚೇರಿಯಲ್ಲಿ ಕೆಲಸ ಮಾಡುವ ಇಬ್ಬರು ಸಿಬ್ಬಂದಿಯೇ ಇದ್ದಾರೆ ಎನ್ನಲಾಗಿದೆ.  ಇಬ್ಬರು ಪೇದೆಗಳು ಈ ಹಿಂದೆ ಖಜಾನೆ ಕೀ ಕಳೆದು ಹೋಗಿತ್ತು ಎಂದು ದೂರಿದ್ದರು. ಹಣ ಕಳವಾಗಿರುವ ಘಟನೆ ಬೆಳಕಿಗೆ ಬರುವುದಕ್ಕೆ ಎರಡು ದಿನದ ಮುಂಚೆ ಇದೇ ಇಬ್ಬರು ಸಿಬ್ಬಂದಿ ಖಜಾನೆ ಕಡೆಗೆ ಹೋಗಿ ಬರುತ್ತಿದ್ದನ್ನು ಉಳಿದ ಸಿಬ್ಬಂದಿ ನೋಡಿದ್ದಾರೆ. ಹೀಗಾಗಿ ಖಜಾನೆಯಿಂದ ಹಣ ಲೂಟಿ ಆಗಿರುವುದರ ಹಿಂದೆ ಈ ಇಬ್ಬರ ಮೇಲೆ ಅನುಮಾನವಿದೆ ಎಂದು ಎಸ್ಪಿ ಅವರಿಗೆ ದೂರು ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply