Connect with us

    KARNATAKA

    ಮಡಿಕೇರಿ : ಪಳಗಿದ ಆನೆ ನೋಡಲು ಹೋಗಿ ಕಾಡಾನೆಯಿಂದ ಅಟ್ಟಿಸಿಕೊಂಡ ದಂಪತಿ ಕೂದಲೆಳೆಯಲ್ಲಿ ಪಾರು..!

    ಮಡಿಕೇರಿ :  ಪಳಗಿದ ಆನೆಗಳನ್ನು ನೋಡಲು  ಹೋದ ಪ್ರವಾಸಿ ದಂಪತಿ ಕಾರಿನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಮಡಿಕೇರಿಯಲ್ಲಿ ನಡೆದಿದ್ದು ದಂಪತಿ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.

     

    ಮಡಿಕೇರಿಯ ದುಬಾರೆ ಕ್ಯಾಂಪ್‌ಗೆ ತೆರಳುತ್ತಿದ್ದ ಪ್ರವಾಸಿ  ಕಾರಿನ ಮೇಲೆ ಕಾಡಾನೆ ದಾಳಿ ಮಾಡಿದ್ದು ವಾಹನಕ್ಕೆ ಹಾನಿಯಾಗಿದೆ. ಮಡಿಕೇರಿಗೆ ಭೇಟಿ ನೀಡಿದ್ದ ಬೆಂಗಳೂರಿನ ದಂಪತಿ ದುಬಾರೆ ಆನೆ ಶಿಬಿರದ ಕಡೆಗೆ ಟ್ಯಾಕ್ಸಿಯಲ್ಲಿ ತೆರಳುತ್ತಿದ್ದರು. ಈ ವೇಳೆ ಚೆಟ್ಟಳ್ಳಿಯಿಂದ ದುಬಾರೆಗೆ ತೆರಳುತ್ತಿದ್ದಾಗ ಅರಣ್ಯದ ಅಂಚಿನಿಂದ ರಸ್ತೆಗೆ ಕಾಡಾನೆಯೊಂದು ಏಕಾಏಕಿ ದಾಳಿ ಮಾಡಿದೆ. ಟ್ಯಾಕ್ಸಿ ಚಾಲಕ ಹಾಗೂ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗುವಲ್ಲಿ ಯಶಸ್ವಿಯಾದರೆ  ದಾಳಿಯಲ್ಲಿ ಕಾರು ಜಖಂಗೊಂಡಿದೆ. ಘಟನೆಯ ನಂತರ ಮೀನುಕೊಲ್ಲಿ ಮೀಸಲು ಅರಣ್ಯ ಪ್ರದೇಶದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆನೆಗಳನ್ನು ಮರಳಿ ಕಾಡಿಗೆ ಓಡಿಸುವ ಕಾರ್ಯ ಆರಂಭಿಸುವುದಾಗಿ ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply