KARNATAKA
ಕೈಮುಗಿದು ನದಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಮಹಿಳೆ
ಮಡಿಕೇರಿ ಜುಲೈ 21: ನದಿಗೆ ಕೈ ಮುಗಿದು ಹಾರಿದ ಮಹಿಳೆಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಬಲಮುರಿಯ ಕಾವೇರಿ ನದಿ ಬಳಿ ನಡೆದಿದೆ.
ಮಡಿಕೇರಿ ತಾಲೂಕಿನ ಮೂರ್ನಾಡು ಮೂಲದ ಮಹಿಳೆಯೊಬ್ಬರು ಕಾವೇರಿ ನದಿ ಸೇತುವೆ ಬಳಿ ಕೈಮುಗಿದು, ತುಂಬಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿದ್ದಾರೆ. ಈ ವೇಳೆ ಅಲ್ಲೇ ಇದ್ದ ಯುವಕರು ಮಹಿಳೆಯ ರಕ್ಷಣೆ ಮಾಡಿದ್ದಾರೆ. ಈ ಎಲ್ಲಾ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.ಸದ್ಯ ಮಹಿಳೆಯನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
You must be logged in to post a comment Login