DAKSHINA KANNADA
ಮಳೆಯ ಅಬ್ಬರಕ್ಕೆ ಜಲಾವೃತವಾದ ಮಧೂರು ಮಹಾಗಣಪತಿ ದೇವಸ್ಥಾನ

ಪುತ್ತೂರು ಮೇ30: ಮುಂಗಾರು ಮಳೆ ಆರ್ಭಟ ಜೋರಾಗಿದ್ದು, ಮಳೆಯ ಅಬ್ಬರಕ್ಕೆ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಕಾಸರಗೋಡು ಜಿಲ್ಲೆಯಲ್ಲೂ ಮಳೆ ಮುಂದುವರೆದಿದ್ದು, ನದಿಗಳು ತುಂಬಿ ಹರಿಯುತ್ತಿದೆ. ಇನ್ನು ಇತಿಹಾಸ ಪ್ರಸಿದ್ದ ಮಧೂರು ಮಹಾಗಣಪತಿ ದೇವಸ್ಥಾನ ಜಲಾವೃತಗೊಂಡಿದೆ.
ಮಧುವಾಹಿನಿ ಹೊಳೆ ತುಂಬಿ ಹರಿಯುತ್ತಿರುವುದರಿಂದ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಪ್ರಾಂಗಣದೊಳಗೆ ಮಳೆ ನೀರು ತುಂಬಿಕೊಂಡಿದೆ. ಸುಮಾರು 1 ಆಡಿಗೂ ಹೆಚ್ಚು ನೀರು ತುಂಬಿಕೊಂಡಿದೆ ಎಂದು ಹೇಳಲಾಗಿದೆ.

ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ತಗ್ಗು ಪ್ರದೇಶದಲ್ಲಿ ನೀರು ತುಂಬಿ ಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಇತ್ತೀಚಿಗೆ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಿಜೃಂಭಣೆಯಾಗಿ ಬ್ರಹ್ಮಕಲಶ ನೆರವೇರಿತ್ತು.