LATEST NEWS
ಮುಂಬೈ – ಪ್ರಪಾತಕ್ಕೆ ಬಿದ್ದ ಬಸ್ 12ಕ್ಕೂ ಅಧಿಕ ಮಂದಿ ಸಾವು…!!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಮುಂಬೈ ಎಪ್ರಿಲ್ 15: ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ಪ್ರಪಾತಕ್ಕೆ ಬಿದ್ದ ಪರಿಣಾಮ ಕನಿಷ್ಠ 12 ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.
ಪುಣೆಯಿಂದ ಮುಂಬೈಗೆ ಹೋಗುತ್ತಿದ್ದಾಗ ಹೆದ್ದಾರಿಯ ಶಿಂಗ್ರೋಬಾ ದೇವಸ್ಥಾನದ ಬಳಿ ಮುಂಜಾನೆ 4.50ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 27 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಬಾಜಿ ಪ್ರಭು ವಾಡಕ್ ಗ್ರೂಪ್ನ ಸದಸ್ಯರು ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್ವಾಡ್ನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮುಂಬೈನ ಗೋರೆಗಾಂವ್ಗೆ ಹಿಂತಿರುಗುತ್ತಿದ್ದರು. ಶನಿವಾರ ನಡುರಾತ್ರಿ 1 ಗಂಟೆ ಸುಮಾರಿಗೆ ಬಸ್ ಸ್ಥಳದಿಂದ ನಿರ್ಗಮಿಸಿತ್ತು. ಪ್ರಯಾಣಿಕರು ಮುಂಬೈನ ಸಿಯಾನ್ ಮತ್ತು ಗೋರೆಗಾಂವ್ನ ನೆರೆಯ ಪಾಲ್ಘರ್ ಜಿಲ್ಲೆಯ ವಿರಾರ್ಗೆ ಸೇರಿದವರು ಎಂದು ರಾಯಗಢ ಪೊಲೀಸ್ ವರಿಷ್ಠಾಧಿಕಾರಿ ಸೋಮನಾಥ್ ಘರ್ಗೆ ತಿಳಿಸಿದ್ದಾರೆ.
You must be logged in to post a comment Login