Connect with us

    LATEST NEWS

    ಮಹಾರಾಷ್ಟ್ರ – ಬಸ್ ಗೆ ಆಕಸ್ಮಿಕ ಬೆಂಕಿ..26 ಮಂದಿ ಸಜೀವ ದಹನ…!!

    ಮುಂಬೈ ಜುಲೈ 01 :ಬಸ್ ಒಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 26 ಮಂದಿ ಸಜೀವವಾಗಿ ದಹನವಾದ ಘಟನೆ ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್​​ಪ್ರೆಸ್ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.


    ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು ಎನ್ನಲಾಗಿದ್ದು, ಇಂದು ಬೆಳಗಿನ ಜಾವ 2 ಗಂಟೆಗೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

    ಅಪಘಾತಕ್ಕೀಡಾದ ಬಸ್ ವಿದರ್ಭ ಟ್ರಾವೆಲ್ಸ್​ಗೆ ಸೇರಿದ್ದಾಗಿದ್ದು, ಬಸ್‌ನಲ್ಲಿ ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್‌ನಿಂದ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ವರದಿಗಳು ತಿಳಿಸಿವೆ. ಸಿಂಧಖೇಡರಾಜ ಸಮೀಪದ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್’ಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ನಂತರ ಕೇವಲ ಎಂಟು ಮಂದಿ ಪ್ರಯಾಣಿಕರು ಮಾತ್ರ ಹೊರಬರಲು ಸಾಧ್ಯವಾಗಿದೆ. ಇನ್ನುಳಿದ 26 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply