ಬೆಳ್ತಂಗಡಿ ಡಿಸೆಂಬರ್ 19: ಸಮಾಜಘಾತುಕಚಟುವಟಿಕೆಗಳಲ್ಲಿತೊಡಗಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಮತ್ತೆ ಗಡಿ ಪಾರು ಮಾಡಿ ಪುತ್ತೂರು ಸಹಾ ಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.

ರಾಯಚೂರು ಜಿಲ್ಲೆ ಮಾನ್ವಿ ಪೊ ಲೀಸ್ ಠಾಣಾ ವ್ಯಾಪ್ತಿಗೆ ಅವರು ಗಡಿಪಾರಾಗಿದ್ದಾರೆ. ಈ ಮಧ್ಯೆ, ಬೆಳ್ತಂಗಡಿ ಪೊಲೀಸರು ಗುರುವಾರ ನೋಟಿಸ್ ನೀಡಲು ಉಜಿರೆಯ ಅವರ ಮನೆಗೆ ಬಂದಾಗ ಮಹೇಶ್ ಶೆಟ್ಟಿ ಮನೆಯಲ್ಲಿ ಇರಲ್ಲಿಲ್ಲ.
ಈ ನಡುವೆ, ಬೆಳ್ತಂಗಡಿ ಪೊಲೀಸರು ಮಹೇಶ ಶೆಟ್ಟಿ ಅವರ ಗಡೀಪಾರು ಆದೇಶವನ್ನು ಧ್ವನಿವರ್ಧಕದ ಮೂಲಕ ಉಜಿರೆ ಪೇಟೆಯಲ್ಲಿ ಗುರುವಾರ ಮುಸ್ಸಂಜೆ ಸಾರ್ವಜನಿಕರಿಗೆ ತಿಳಿಸುವ ಕಾರ್ಯ ಮಾಡಿದರು.
ಮಹೇಶ್ ಶೆಟ್ಟಿ ಅವರ ಗಡಿ ಪಾರು ಆದೇಶವನ್ನು ಧ್ವನಿವರ್ಧಕದ ಮೂಲಕ ಉಜಿರೆ ಪೇಟೆಯಲ್ಲಿ ಗುರುವಾರ ಮುಸ್ಸಂಜೆ ಸಾರ್ವಜನಿಕರಿಗೆ ತಿಳಿಸುವ ಕಾರ್ಯ ಮಾಡಿದ್ದಾರೆ. ನ್ಯಾಯಾಲಯದ ಮತ್ತು ಪುತ್ತೂರು ಉಪ ವಿಭಾ ಗಾಧಿಕಾರಿ ಆದೇಶವನ್ನು ಮೈಕ್ ಮೂಲಕ ತಿಳಿಸಿದರು.



