DAKSHINA KANNADA
ಪುತ್ತೂರು : ಶಿರಾಡಿ ಘಾಟಿಯಲ್ಲಿ ಮಳೆ ಕಾರಣ ಲಾರಿ -ಟ್ರಕ್ ಮಧ್ಯೆ ಅಪಘಾತ, ಚಾಲಕರು ಪಾರು..

ಪುತ್ತೂರು : ದಕ್ಷಿಣ ಕನ್ನಡ ವನ್ನು ಬೆಂಗಳೂರಿಗೆ ಸಂಪರ್ಕಿಸುವ ಶಿರಾಡಿಘಾಟ್ ನಲ್ಲಿ ಲಾರಿ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದೆ.
ತುಂತುರು ಮಳೆ ಇದ್ದ ಕಾರಣ ಬ್ರೇಕ್ ಹಾಕಿದ ರಭಸಕ್ಕೆ ಸರಕಿನ ಲಾರಿ ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಲಾರಿ ಹಿಂದೆ ಇದ್ದ ಬಾಸ್ಕೆಟ್ ಎದುರಿನಲ್ಲಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದ್ದು ಸೀಟ್ ಬೆಲ್ಟ್ ಧರಿಸಿದ್ದ ಕಾರಣ ಟ್ರಕ್ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಅಪಘಾತದ ದೃಶ್ಯ ಟ್ರಕ್ ನ ಕ್ಯಾಬಿನ್ ಕೆಮರಾದಲ್ಲಿ ಸೆರೆಯಾಗಿದೆ. ಎರಡೂ ವಾಹನಗಳ ಚಾಲಕ ಹಾಗೂ ನಿರ್ವಾಹಕರು ಅಪಾಯದಿಂದ ಪಾರಾಗಿದ್ದು ಘಟನೆಯಿಂದ ಈ ಹೆದ್ದಾರಿಯಲ್ಲಿ ಕೆಲ ಸಮಯ ಸಂಚಾರ ವ್ಯವಸ್ಥೆ ಸ್ಥಗಿತಗೊಂಡಿತ್ತು. ಮಾಹಿತಿ ಪಡೆದ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
