KARNATAKA
ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ, ಬೈಕಿಗೆ ಬಸ್ ಡಿಕ್ಕಿ- ಇಬ್ಬರು ಮೃತ್ಯು, ಮತ್ತೋರ್ವ ಗಂಭೀರ
ಕಲಬುರಗಿ: ಕಲಬುರಗಿಯ ನಂದಿಕೂರ್ ಬಸ್ ನಿಲ್ದಾಣ ಹತ್ತಿರದ ಪೇಟ್ರೊಲ್ ಪಂಪ್ ಬಳಿ ಸೋಮವಾರ ಬೆಳಗ್ಗಿನ ಜಾವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬಲಿಯಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
ಕಲಬುರಗಿಯ ತನೋಜ್(18) ,ಅಭಿಷೇಕ್(19)ಮೃತ ದುರ್ದೈವಿಗಳಾಗಿದ್ದಾರೆ. ಬಸ್ ಜೇವರ್ಗಿಯಿಂದ ಕಲಬುರಗಿ ಹೊರಟಿದ್ದ ಬಸ್ಗೆ ಬೈಕ್ ಡಿಕ್ಕಿ ಹೊಡೆದಿದ್ದು ಡಿಕ್ಕಿ ರಭಸಕ್ಕೆ ಸವಾರ ಹಾರಿ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೈಕ್ ಸವಾರ ಸೇರಿ ಇಬ್ಬರು ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕಿಗೆ ಬೆಂಕಿ ಹೊತ್ತಿಕೊಂಡಿದ್ದು, ಸುಟ್ಟುಕರಕಲಾಗಿದೆ. ರೆ, ಜೇವರ್ಗಿ ತಾಲೂಕಿನ ಶಾಖಾಪುರ ಗ್ರಾಮದ ನಿವಾಸಿಗಳಾದ ತನೋಜ್(18) ,ಅಭಿಷೇಕ್(19) ಕಾಶಿಯಿಂದ ಬಂದಿದ್ದ ಸ್ನೇಹಿತನನ್ನು ಕರೆಯಲು ಕಲಬುರಗಿಗೆ ಬಂದಿದ್ದರು. ಯಶ್ ಪಾಲ್ ರೆಡ್ಡಿ ಎಂಬಾತನನ್ನು ಕರೆದುಕೊಂಡು ಹೋಗುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
You must be logged in to post a comment Login