Connect with us

LATEST NEWS

ವಿಶಾಖಪಟ್ಟಣಂ ಬಂದರಿನಲ್ಲಿ ಭಾರಿ ಅಗ್ನಿಅನಾಹುತ, 40 ಮೀನುಗಾರಿಕಾ ದೋಣಿಗಳು ಸುಟ್ಟು ಭಸ್ಮ..!

 

ವಿಶಾಖಪಟ್ಟಣಂ :  ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಮೀನುಗಾರಿಕಾ ಬಂದರಿನಲ್ಲಿ ಭಾರಿ ಬೆಂಕಿ ಅನಾಹುತಾ ಸಂಭವಿಸಿದ್ದು  ಸುಮಾರು 40 ಮೀನುಗಾರಿಕಾ ದೋಣಿಗಳು ಸುಟ್ಟು ಭಸ್ಮವಾಗಿವೆ.

ಭಾನುವಾರ ತಡರಾತ್ರಿ ಒಂದು ಹಡಗಿಗೆ ಕಾಣಿಸಿಕೊಂಡ ಬೆಂಕಿ ಕ್ರಮೇಣವಾಗಿ 40 ಹಡಗುಗಳಿಗೆ ವ್ಯಾಪಿಸಿತ್ತು. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಮತ್ತು ಘಟನೆಗೆ ಸ್ಪಷ್ಟ ಕಾರಣವೂ ತಿಳಿದುಬಂದಿಲ್ಲ. ತಕ್ಷಣವೇ ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿವೆ, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಿಪರೀತ ಶಾಖದ ಕಾರಣ ಬೋಟ್​ನಲ್ಲಿ ಇರಿಸಲಾಗಿದ್ದ ಎಲ್​ಪಿಜಿ ಸಿಲಿಂಡರ್​ಗಳು ಸ್ಫೋಟಗೊಂಡಿದ್ದು, ಬೆಂಕಿ ಹರಡಲು ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *