Connect with us

    UDUPI

    ಗ್ರಾಹಕ ಹಕ್ಕುಗಳ ಬಗ್ಗೆ ಅರಿವು ಮೂಡಿಸಿ :ಸಚಿವ ಪ್ರಮೋದ್ ಮಧ್ವರಾಜ್

    ಗ್ರಾಹಕ ಹಕ್ಕುಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ :ಸಚಿವ ಪ್ರಮೋದ್ ಮಧ್ವರಾಜ್

    ಉಡುಪಿ, ಜನವರಿ 11: ಗ್ರಾಹಕ ಹಕ್ಕುಗಳ ಹಾಗೂ ಜವಾಬ್ದಾರಿ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಜನಜಾಗೃತಿ ಮೂಡಿಸಿ ತನ್ಮೂಲಕ ಗ್ರಾಹಕ ಹಕ್ಕುಗಳನ್ನು ಸಂರಕ್ಷಿಸುವಂತಹ ಮಹತ್ವದ ಕಾರ್ಯ ವಿದ್ಯಾರ್ಥಿಗಳ ಮೇಲಿದೆ ಎಂದು ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
    ಅವರು ಇಂದು ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಡುಪಿ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಉಡುಪಿ, ಬಸ್ರೂರು ಬಳಕೆದಾರರ ವೇದಿಕೆ ಕುಂದಾಪುರ, ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಿಯಾಳಿ ಕಮಲಾ ಬಾಯಿ ಹೈಸ್ಕೂಲ್‍ನಲ್ಲಿ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

    ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಅರಿತು ಕಾರ್ಯಪ್ರವೃತ್ತರಾದಾಗ ನ್ಯಾಯ ದೊರಕಲು ಸಾಧ್ಯ; ಗ್ರಾಹಕ ವೇದಿಕೆಗಳು ಇಂದು ತ್ವರಿತವಾಗಿ ದೂರುಗಳನ್ನು ನಿರ್ವಹಿಸುತ್ತಿದ್ದು, ಕಾನೂನಿನ ರಕ್ಷಣೆ ಪಡೆಯುವ ಹಕ್ಕಿದೆ.

    ಈ ಕುರಿತಾಗಿ ಜನರಲ್ಲಿ ತಿಳುವಳಿಕೆ ಮೂಡಿಸಬೇಕು. ತಿಳುವಳಿಕೆ ಮೂಡಿಸುವ ಕೆಲಸ ಶಾಲಾ ಕಾಲೇಜುಗಳಲ್ಲಿ ಆಗಬೇಕು ಎಂದರು.

    ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷರಾದ ಶೋಭಾ ಸಿ.ವಿ ಮಾತನಾಡಿ, ಪ್ರತಿಯೊಬ್ಬ ಗ್ರಾಹಕನಿಗೂ ತಾನೂ ಕೊಳ್ಳುವ ವಸ್ತುವಿನ ಬೆಲೆ, ಉಪಯುಕ್ತತೆ, ವಸ್ತುವಿನ ಸುರಕ್ಷತೆ, ವಸ್ತುವಿನ ಉಪಯೋಗಗಳನ್ನು ಅಂಗಡಿ ಮಾಲಿಕನಿಂದ ಕೂಲಂಕುಷವಾಗಿ ತಿಳಿದುಕೊಳ್ಳುವ ಹಕ್ಕು ಹಾಗೂ ಕರ್ತವ್ಯವಿದೆ.

    ಉಡುಪಿ ಜಿಲ್ಲಾ ಗ್ರಾಹಕರ ವೇದಿಕೆಯ ವಿಶ್ವಸ್ತ ಎ.ಪಿ.ಕೊಡಂಚ ಇವರು ಉಪನ್ಯಾಸ ನೀಡಿದರು.

    ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಮೀನಾಕ್ಷಿ ಮಾಧವ ಬನ್ನಂಜೆ, ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಾಧಿಕಾರಿ ಎಚ್.ಶಾಂತರಾಮ್, ಉಡುಪಿ ಬಳಕೆದಾರರ ವೇದಿಕೆಯ ಸಂಚಾಲಕ ದಾಮೋದರ ಐತಾಳ್, ಕಡಿಯಾಳಿ ಕಮಲಾಬಾಯಿ ಹೈಸ್ಕೂಲ್ ಮುಖ್ಯೋಪಾಧ್ಯಾಯ ಗಣೇಶ್ ಮೂರ್ತಿ ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply