Connect with us

LATEST NEWS

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಖ್ಯಾತ ನಟಿ ಮಾಲಾಶ್ರೀ

Share Information

ಮಂಗಳೂರು ಅಗಸ್ಟ್ 09: ಕನ್ನಡದ ಖ್ಯಾತ ನಟಿ ಮಾಲಾಶ್ರೀ ತಮ್ಮ ಮಗಳ ಜೊತೆ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.


ತನ್ನ ಸ್ನೇಹಿತ ಹೇಳಿಕ ಮಾತಿನಂತೆ ಕಳೆದ ಮೂರು ತಿಂಗಳ ಹಿಂದಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆನು. ಆದರೆ ನಾನು ಏನು ಬೆಡಿಕೊಂಡಿದ್ದೆನೋ ಅದೆಲ್ಲವೂ ಪವಾಡದಂತೆ ನಡೆಯಿತು. ಕ್ಷೇತ್ರದ ಶಕ್ತಿಯನ್ನು ಹೇಳತೀರದು. ಬಹಳಷ್ಟು ಪಾಸಿಟಿವ್ ಎನರ್ಜಿ ಕ್ಷೇತ್ರದಲ್ಲಿದೆ. ಒಳಗೆ ಹೋಗುವಾಗಲೇ ಸಾನಿಧ್ಯದ ಶಕ್ತಿ ಭಾಸವಾಗುತ್ತದೆ. ಬೇಡಿಕೆ ಈಡೇರಿದ ಹಾಗೆ ಹರಕೆ ತೀರಿಸಿ ಮತ್ತೆ ಆಶೀರ್ವಾದ ಪಡೆಯುವ ಉದ್ದೇಶದಿಂದ ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಬಂದಿದ್ದೇನೆ. ಮುಂದೆಯೂ ಬರುತ್ತಿರುತ್ತೇನೆ ಎಂದರು.


ಈ ಸಂದರ್ಭ ಶ್ರೀ ಪಂಜಂದಾಯ ಬಂಟ ವೈದ್ಯನಾಥ ಆದಿ ಕೊರಗತನಿಯ ಸೇವಾ ಟ್ರಸ್ಟ್ ನ ಟ್ರಸ್ಟೀಗಳು ನಟಿ ಮಾಲಶ್ರೀ ಹಾಗೂ ಪುತ್ರಿಯನ್ನು ಸನ್ಮಾನಿಸಿದರು.


Share Information
Advertisement
Click to comment

You must be logged in to post a comment Login

Leave a Reply