Connect with us

DAKSHINA KANNADA

ಪುತ್ತೂರು ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪಿ ಬಂಧನ

ಪುತ್ತೂರು ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪಿ ಬಂಧನ

ಪುತ್ತೂರು ಜುಲೈ 5: ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಇನ್ನೊಂದು ಅತ್ಯಾಚಾರಕ್ಕೆ ಯತ್ನ ಪ್ರಕರಣ ಪುತ್ತೂರಿನ ಪಾಪೆಮಜಲು ಎಂಬಲ್ಲಿ ನಡೆದಿದೆ. ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಅತ್ಯಾಚಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಂದು ಮುಂಜಾನೆ ಶಾಲೆಗೆ ಹೋಗುತ್ತಿದ್ದ ದಲಿತ ಬಾಲಕಿಯನ್ನು ಅಡ್ಡಗಟ್ಟಿದ ಆರೋಪಿ ಮನೆಯಲ್ಲಿ ತನ್ನ ತಾಯಿಗೆ ಆನಾರೋಗ್ಯವಾಗಿದ್ದು, ಆಕೆಯನ್ನು ಮೇಲೆತ್ತಲು ತನಗೆ ಸಹಕರಿಸುವಂತೆ ಕೋರಿದ್ದ ಎನ್ನಲಾಗಿದೆ. ಒಪ್ಪಿಕೊಂಡ ಬಾಲಕಿಯನ್ನು ನೇರವಾಗಿ ನಿರ್ಜನ ಪ್ರದೇಶವೊಂದಕ್ಕೆ ಕರೆದೊಯ್ದಿದ್ದಾನೆ.

ತಾಯಿ ದೂರದಲ್ಲಿ ಬಿದ್ದಿದ್ದಾರೆ ಎಂದು ಹೇಳಿ ಆಕೆಯನ್ನು ಗುಡ್ಡಕ್ಕೆ ಕರೆದುಕೊಂಡು ಹೋಗಿ ಕಿರುಚಾಡದಂತೆ ಬಾಯಿಗೆ ಕೈ ಅಡ್ಡಹಿಡಿದು ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ವೇಳೆ ಪ್ರಜ್ಞೆ ತಪ್ಪಿ ಬಿದ್ದಿದ್ದ ಬಾಲಕಿಯ ಮೇಲೆ ಆರೋಪಿ ಆತ್ಯಾಚಾರವೆಸಗಿದ್ದ’ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

‘ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿ ಎಚ್ಚರಗೊಂಡು 9 ಗಂಟೆಗೆ ವೇಳೆಗೆ ಮತ್ತೆ ಮನೆಗೆ ತಲುಪಿದ್ದಾಳೆ. ಆಯಾಸಗೊಂಡು ಮಲಗಿದ್ದ ಆಕೆಯನ್ನು ಕುಟುಂಬದವರು ವಿಚಾರಿಸಿದಾಗ ವಿಷಯವನ್ನು ತಿಳಿಸಿದ್ದಾಳೆ. ಕೂಡಲೇ ಬಾಲಕಿಯನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆತಂದು ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ ತಪ್ಪಿಸಿಕೊಂಡು ಬಂದ ಬಾಲಕಿ ಮನೆಗೆ ಬಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಪೋಷಕರು ವಿಚಾರಿಸಿದಾಗ ಅತ್ಯಾಚಾರ ಯತ್ನ ವಿಚಾರ ಬಯಲಾಗಿದೆ‌. ಸಂಪ್ಯ ಪೋಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *