LATEST NEWS
ವಿಷ ಸೇವಿಸಿ ಕಾಡಿನ ಮಧ್ಯೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಉಡುಪಿ ಎಪ್ರಿಲ್ 24: ಕಾಡಿನ ಮಧ್ಯೆ ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ಮಣ್ ನ ಬೋಳ ಗ್ರಾಮದ ನಡಿಬೆಟ್ಟು ಎಂಬಲ್ಲಿ ನಡೆದಿದೆ.
ಮೃತರನ್ನು ಕಾರ್ಕಳ ಮಾಳ ಹುಕ್ರಟ್ಟೆ ನಿವಾಸಿ ಪ್ರಭಾಕರ ಪೂಜಾರಿ (50) ಎಂದು ಗುರುತಿಸಲಾಗಿದ್ದು, ಬೋಳ ನಡಿಬೆಟ್ಟು ಎಂಬಲ್ಲಿ ಕಾಡಿನ ಮಧ್ಯೆ ಇವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳದಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದ್ದು ನನ್ನ ಸಾವಿಗೆ ನಾನೇ ಕಾರಣ ಮಕ್ಕಳೇ ಕ್ಷಮಿಸಿ ಎಂದು ಬರೆಯಲಾಗಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login