Connect with us

LATEST NEWS

ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ವ್ಯಕ್ತಿ ಸಾವು…!!

ಮಂಗಳೂರು ಮಾರ್ಚ್ 27: ನೇತ್ರಾವತಿ ನದಿಗೆ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಹರೇಕಳದಲ್ಲಿ ನಡೆದಿದೆ.


ಮೃತರನ್ನು ಹರೇಕಳ ಬೈತಾರ್ ನಿವಾಸಿ ಪ್ರಕಾಶ್ ಗಟ್ಟಿ (46) ಎಂದು ಗುರುತಿಸಲಾಗಿದೆ. ಇವರು ಹರೇಕಳದ ಉಳಿದೊಟ್ಟು ಬಳಿಯ ಕೊಡಮಣಿತ್ತಾಯ ದೈವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಅದಕ್ಕಾಗಿ ಪ್ರಕಾಶ್ ಅವರು ಸ್ನೇಹಿತರು ಹಾಗೂ ಸಂಬಂಧಿಕರನ್ನು ಮನೆಗೆ ಕರೆದಿದ್ದರು. ಸುಮಾರು 20 ರಷ್ಟು ನೆಂಟರು, ಸ್ನೇಹಿತರನ್ನು ಕರೆದುಕೊಂಡು ಪ್ರಕಾಶ್ ಅವರು ತಮ್ಮ ತೋಟದ ಬಳಿಯಿರುವ ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಅಲ್ಲಿ ನದಿ ನೀರಿಗೆ ಅಡಿಕೆ ಮರವನ್ನು (ಬಂಬು) ಅಡ್ಡವಾಗಿ ಹಾಕಿದ್ದರು. ಅದರಲ್ಲಿ ನಡೆದುಕೊಂಡು ಹೋಗುವ ಸಂದರ್ಭ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, ನದಿ ನೀರಿನ ಹೂಳಿನಲ್ಲಿ ಹೂತುಹೋಗಿದ್ದರು. ಈಜಲು ಪರಿಣತರಾಗಿದ್ದರೂ ಮೇಲೆ ಬರಲು ಸಾಧ್ಯವಾಗದೇ, ನದಿ ನೀರಿನಲ್ಲಿ ಮುಳುಗಿದ್ದಾರೆ ಎಂದು ತಿಳಿದುಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *