KARNATAKA
ಬೆಂಗಳೂರು – ಹಣದ ಲೆಕ್ಕಕೊಡದಿದ್ದಕ್ಕೆ ಮಗನಿಗೆ ಬೆಂಕಿ ಹಚ್ಚಿ ಕೊಂದ ಅಪ್ಪ….!!
ಬೆಂಗಳೂರು ಎಪ್ರಿಲ್ 07:ವ್ಯಾಪಾರದಲ್ಲಿ ಹಣದ ಲೆಕ್ಕವನ್ನು ಸರಿಯಾಗಿ ಕೊಡಲಿಲ್ಲ ಎಂದು ಅಪ್ಪ ಹಾಡು ಹಗಲೇ ಮಗನಿಗೆ ಬೆಂಕಿ ಹಚ್ಚಿ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಪ್ರಿಲ್ 1 ರಂದು ಈ ಘಟನೆ ನಡೆದಿದ್ದು ಎಂದು ಹೇಳಲಾಗಿದ್ದು, ಬೆಂಕಿ ಹಚ್ಚಿದ ಹಿನ್ನಲೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗ ಇಂದು ಸಾವನಪ್ಪಿದ್ದಾರೆ.
ಆಜಾದ್ ನಗರದ ನಿವಾಸಿ ಸುರೇಂದ್ರ ಅವರಿಗೆ ಅರ್ಪಿತ್ ಎಂಬ ಮಗನಿದ್ದಾನೆ. ಸುರೇಂದ್ರ ಅರಿಗೆ ಕಟ್ಟಡ ಕಾಮಗಾರಿಗೆ ಸಂಬಂಧಿಸ ವ್ಯವಹಾರ ಇದ್ದು , ಮಗ ಅರ್ಪಿತ್ ತಂದೆಗೆ ಕೆಲದಲ್ಲಿ ಸಹಾಯ ಮಾಡುತ್ತಿದ್ದ ಎಂದು ಹೇಳಲಾಗಿದ್ದು, ಈ ನಡುವೆ ಕಳೆದ ಕೆಲವು ತಿಂಗಳಿನಿಂದ ಮಗ ವ್ಯವಹಾರದ ಹಣದ ಮಾಹಿತಿ ಸರಿಯಾಗಿ ನೀಡುತ್ತಿಲ್ಲ ಎಂದು ಗಲಾಟೆ ನಡೆದಿದ್ದು, ಇದರಿಂದ ಕೋಪಗೊಂಡ ಸುರೇಂದ್ರ ಮನೆಯೊಳಗೆ ತಮ್ಮ ಮಗನ ಮೇಲೆ ಪೆಟ್ರೋಲ್ ಸುರಿದಿದ್ದಾರೆ. ಪೆಟ್ರೋಲ್ ಸುರಿದಿದ್ದರಿಂದ ಅರ್ಪಿತ್ ಮನೆಯಿಂದ ಹೊರಗೆ ಬಂದಿದ್ದಾರೆ. ಈ ವೇಳೆ ಅರ್ಪಿತ್ ತನ್ನ ತಂದೆಗೆ ಬೇಡಿಕೊಂಡಿದ್ದಾರೆ. ಆದರೂ ಸುರೇಂದ್ರ ತನ್ನ ಮಗನ ಮೇಲೆ ಬೆಂಕಿ ಕಡ್ಡಿ ಗೀರಿ ಎಸೆದಿದ್ದಾರೆ. ಮೊದಲನೇ ಬಾರಿ ಬೆಂಕಿ ಹೊತ್ತದ ಕಾರಣ, ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಿ ಎಸೆದಿದ್ದಾರೆ. ಬಳಿಕ ಅರ್ಪಿತ್ ದೇಹಕ್ಕೆ ಬೆಂಕಿ ಹೊತ್ತಿಕೊಂಡಿದ್ದರಿಂದ ನಗರದ ತುಂಬೆಲ್ಲಾ ಓಡಾಡಿದ್ದಾರೆ.
ಅರ್ಪಿತ್ ದೇಹಕ್ಕೆ ಬೆಂಕಿ ಹೊತ್ತಿಕೊಂಡಿದ್ದರಿಂದ ದೇಹದ ಬಹುಪಾಲು ಭಾಗ ಸುಟ್ಟುಹೋಗಿತ್ತು. ಬಳಿಕ ಸ್ಥಳೀಯರು ಬೆಂಕಿ ನಂದಿಸಿ ಅರ್ಪಿತ್ನನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ನಿಗಾ ಘಟಕದಲ್ಲಿಟ್ಟು ಅರ್ಪಿತ್ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣದೆ ಮೃತಪಟ್ಟಿದ್ದಾರೆ. ಆರೋಪಿ ತಂದೆಯನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
You must be logged in to post a comment Login