Connect with us

DAKSHINA KANNADA

ಇಚ್ಲಂಪಾಡಿ – ಗುಂಡ್ಯ ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರುಪಾಲು

ಕಡಬ ಜೂನ್ 08: ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿ ಯ ಗುಂಡ್ಯ ಹೊಳೆಯಲ್ಲಿ ನಡೆದಿದೆ. ಮೃತರನ್ನು ಇಚ್ಲಂಪಾಡಿ ನಿವಾಸಿ ಚೇತನ್ ಶೆಟ್ಟಿ (21) ಎಂದು ಗುರುತಿಸಲಾಗಿದೆ.


ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡುತ್ತಿರುವ ಚೇತನ್ ಇದು ರಜೆ ಹಿನ್ನೆಲೆ ಮನೆಯಲ್ಲಿದ್ದರು. ಇಂದು ಬೆಳಿಗ್ಗೆ ಗೆಳೆಯರೊಂದಿಗೆ ಕ್ರಿಕೆಟ್ ಆಡಲು ಹೋದ ಚೇತನ್ ಮಧ್ಯಾಹ್ನ ಇಚ್ಚಂಪಾಡಿ ಸೇತುವೆ ಬಳಿ ಗುಂಡ್ಯ ಹೊಳೆಗೆ ಸ್ನಾನಕ್ಕೆಂದು ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *