MANGALORE
ಉಡುಪಿ ಮಧ್ವ ಸರೋವರದಲ್ಲಿ ಮುಳುಗಿ ಯಾತ್ರಾರ್ಥಿ ಸಾವು
ಉಡುಪಿ ಮಧ್ವ ಸರೋವರದಲ್ಲಿ ಮುಳುಗಿ ಯಾತ್ರಾರ್ಥಿ ಸಾವು
ಉಡುಪಿ ಡಿಸೆಂಬರ್ 3: ಶ್ರೀ ಕೃಷ್ಣ ಮಠದ ಮಧ್ವ ಸರೋವರದಲ್ಲಿ ಯಾತ್ರಾರ್ಥಿಯೋರ್ವ ಮುಳುಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ.
ಮೃತ ವ್ಯಕ್ತಿಯನ್ನು ಶಿವಮೊಗ್ಗ ವಿದ್ಯಾನಗರ ನಿವಾಸಿ ಆದರ್ಶ್(39) ಎಂದು ಗುರುತಿಸಲಾಗಿದ್ದು, ಇಂದು ಬೆಳಿಗ್ಗೆ ಸುಮಾರು 5:30ರ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
ಇಂದು ಮುಂಜಾನೆ ಆದರ್ಶ್ ಅವರು ಮಧ್ವ ಸರೋವರದಲ್ಲಿ ಸ್ನಾನಕ್ಕಿಳಿದವರು ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ನಡೆಸಿದರೂ ಪ್ರಯೋಜನವಾಗಲಿಲ್ಲ. ಬಳಿಕ ಮುಳುಗು ತಜ್ಞ ಅರುಣ ಕುಮಾರ್ ದೆಂದೂರುಕಟ್ಟೆ ಸರೋವರದ ತಳ ಜಾಲಾಡಿ ಮೃತದೇಹವನ್ನು ಮೇಲಕ್ಕೆ ತರಲಾಯಿತು.
ನಿನ್ನೆ ಭಾನುವಾರ ಉಡುಪಿಯ ವಸತಿಗೃಹದಲ್ಲಿ ತಂಗಿದ್ದ ಆದರ್ಶ್ ವಸತಿಗೃಹದ ನೋಂದಣಿ ಪುಸ್ತಕದಲ್ಲಿ ವಿದ್ಯಾನಗರ, 4ನೇ ಎ ಕ್ರಾಸ್ ಶಿವಮೊಗ್ಗ ಎಂಬ ವಿಳಾಸ ದಾಖಲಿಸಿದ್ದಾರೆ. ಮೃತದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.ಘಟನೆ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Facebook Comments

You may like
ಯಾರಿಗೂ ವಂಚನೆ ಮಾಡಿಲ್ಲ – ಐ ವಿಲ್ ಕಮ್ ಬ್ಯಾಕ್ ಅಗೈನ್ – ಬಿ.ಆರ್ ಶೆಟ್ಟಿ
ಮದುವೆ ಸಂಭ್ರಮ ಮಗಿಯುವ ಮೊದಲೆ ಹೃದಯಾಘಾತಕ್ಕೆ ಬಲಿಯಾದ ನವವಧು
ಕಾಡಾನೆ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋದಾ ಯುವಕ ಅಪ್ಪಚ್ಚಿ!
ಸುರತ್ಕಲ್ ಗುಡ್ಡೆಕೊಪ್ಲ್ ಬೀಚ್ ನಲ್ಲಿ ಬಾಲಕ ನೀರುಪಾಲು
ಕೋಟ – ಬೈಕ್ ಗೆ ಕಾರು ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಮೂತ್ರ ವಿಸರ್ಜನೆಗೆ ಹೋಗಿದ್ದ ಲಾರಿ ಚಾಲಕನ್ನು ತುಳಿದು ಸಾಯಿಸಿದ ಕಾಡಾನೆ
You must be logged in to post a comment Login