ಕಡಬ ಎಪ್ರಿಲ್ 17: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಏಕಾಏಕಿ ಸಭೆಯಲ್ಲಿದ್ದ  ವ್ಯಕ್ತಿಯೋರ್ವರು ವೇದಿಕೆಗೆ ನುಗ್ಗಿ ಅರ್ಥಧಾರಿಯ ಮೈಮೇಲೆ ಎರಗಿದ ಘಟನೆ ನಡೆದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ.


ಕಡಬದ ನಂದುಗುರಿ ಎಂಬಲ್ಲಿ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಎಂಬವರ ಮನೆಯಲ್ಲಿ  ಸೇವಾರ್ಥವಾಗಿ ಕಟೀಲು ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಪ್ರದರ್ಶನ ನಡೆಯುತ್ತಿತ್ತು.  ವಿದ್ಯುನ್ಮಾಲಿ ಹಾಗೂ ಅಧಿತಿ ಸಂಭಾಷಣೆ ನಡೆಯುತ್ತಿದ್ದ  ಈ ವೇಳೆ  ಸಭೆಯಿಂದ ಏಕಾಏಕಿ ಓಡೋಡಿ ಬಂದ ವ್ಯಕ್ತಿಯೋರ್ವರು ಅರ್ಥಧಾರಿಯ ಮೇಲೆ ಎರಗಿದ್ದಾರೆ.


ಏಕಾಏಕಿ ವೇದಿಕೆ ಮೇಲೆ ಹಾರಿ ಬಂದ ವ್ಯಕ್ತಿಯ ವರ್ತನೆಯಿಂದ   ಕಲಾವಿದರು , ಪ್ರೇಕ್ಷಕರು ದಿಗ್ಬ್ರಮೆಗೊಳಗಾಗಿ ಗಲಿಬಿಲಿಗೊಂಡಿದ್ದಾರೆ.  ಕೂಡಲೇ ಆತನನ್ನು ತಡೆದು ಇತರರ ಸಹಕಾರದಿಂದ ಎಳೆದುಕೊಂಡು ದೂರ ಹೋಗಿರುವುದು ವೀಡಿಯೋದಲ್ಲಿದೆ. ವೇದಿಕೆಗೆ ನುಗ್ಗಿದ ವ್ಯಕ್ತಿ ಸ್ಥಳೀಯ ನಿವಾಸಿ ರಾಧಾಕೃಷ್ಣ ಎಂದು ಗುರುತಿಸಲಾಗಿದೆ.

Share Information