Connect with us

    DAKSHINA KANNADA

    ಕುಕ್ಕೆ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಯುವಕ ನಾಪತ್ತೆ….!!

    ಸುಳ್ಯ ಅಗಸ್ಟ್ 21: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ.

    ಸಾಂದರ್ಭಿಕ ಚಿತ್ರ

    ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಮಂಡ್ಯ ಮೂಲದ ಶಿವು (25) ನಾಪತ್ತೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ. ಶಿವು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಕುಕ್ಕೆಗೆ ಆಗಮಿಸಿದ್ದ. ಈ ವೇಳೆ ಸ್ನಾನಕ್ಕೆಂದು ಕುಮಾರಧಾರ ನದಿಗೆ ಇಳಿದಿದ್ದಾನೆ. ಆದರೆ ಸ್ವಲ್ಪ ಹೊತ್ತಿನಲ್ಲೇ ಆತ ನಾಪತ್ತೆಯಾಗಿದ್ದಾನೆ. ಆತನಿಗೆ ಈಜು ಬರುತ್ತಿತ್ತು ಎಂದು ಆತನೊಂದಿಗಿದ್ದ ಸ್ನೇಹಿತರು ತಿಳಿಸಿದ್ದಾರೆ.

    ಸುಬ್ರಹ್ಮಣ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬಂದಿಯೂ ಆಗಮಿಸಿದ್ದು, ಯುವಕನ ಪತ್ತೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply