Connect with us

LATEST NEWS

ಉಡುಪಿ – ಕೈಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ರಕ್ಷಣೆ ಮಾಡಿದ ಪೊಲೀಸರು

ಉಡುಪಿ, ಜೂನ್ 2 : ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ರೋಹನ್ ರಾಜೇಶ್ ಜತ್ತನ್ನ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ. ಕೌಟಂಬಿಕ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿದ್ದ ರೋಹನ್ ಉಡುಪಿ ನಗರದ ಲಾಡ್ಜ್ ಒಂದರಲ್ಲಿ ರೂಮ್ ಬುಕ್ ಮಾಡಿದ್ದರು. ಬಳಿಕ ತನ್ನ ಕೈಯನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರೆಂದು ತಿಳಿದುಬಂದಿದೆ.


ಈ ಮಾಹಿತಿಯನ್ನು ರೋಹನ್ ಮಂಗಳೂರಿನ ತನ್ನ ಸ್ನೇಹಿತ ಆದಿತ್ಯ ಎಂಬವರಿಗೆ ಕರೆ ಮಾಡಿ ತಿಳಿಸಿದ್ದರು. ಬಳಿಕ ಆದಿತ್ಯ ಈ ಬಗ್ಗೆ ಮಂಗಳೂರು ಪೊಲೀಸ್‌ ಕಂಟ್ರೋಲ್ ರೂಮಿಗೆ ಮಾಹಿತಿ ನೀಡಿದರು. ಅಲ್ಲಿಂದ ಉಡುಪಿ ಕಂಟ್ರೋಲ್ ರೂಮಿಗೆ ದೊರೆತ ಮಾಹಿತಿಯಂತೆ ಉಡುಪಿ ನಗರ ಪೊಲೀಸರು ಲಾಡ್ಜ್‌ಗೆ ತೆರಳಿ ರೋಹನನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *