BANTWAL
ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ : ಚಿಂತಾಜನಕ ಸ್ಥಿತಿಯಲ್ಲಿ ಮನೋಜ್..!
ಬಂಟ್ವಾಳ : ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನ ಅಜ್ಜಿಬೆಟ್ಟು ತಿರುವಿನಲ್ಲಿ ಇಂದು ರಾತ್ರಿ ನಡೆದಿದೆ
.
ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನ ಮೇಲೆ ದಾಳಿ ನಡೆಸಿ ಇರಿದು ಪರಾರಿಯಾಗಿದ್ದಾರೆ.
ತೀವ್ರಗಾಯಗೊಂಡ ಯುವಕನನ್ನು ಬ್ರಹ್ಮರಕೊಟ್ಲು ಸಮೀಪದ ನಿವಾಸಿ ಮನೋಜ್ ಎಂದು ಗುರುತ್ತಿಸಲಾಗಿದ್ದು ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದದ್ದು ಪರಿಸ್ಥಿತಿ ಚಿಂತಾಜನಕವಾಗಿದೆ.
ಮನೋಜ್ ವೃತ್ತಿಯಲ್ಲಿ ಇಂಜಿನೀಯರ್ ಆಗಿದ್ದು ವಿದೇಶದಲ್ಲಿ ನೌಕರಿ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಡಿವೈಎಸ್ ಪಿ ವೆಲೈಂಟೆನ್ ಡಿ ಸೋಜಾ, ಇನ್ಸ್ ಪೆಕ್ಟರ್ ಚೆಲುವಾ ರಾಜ್ ಭೇಟಿ ನೀಡಿದ್ದು ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
You must be logged in to post a comment Login