LATEST NEWS
ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ
ಉಡುಪಿ ಸೆಪ್ಟೆಂಬರ್ 27: ಕೊರೊನಾ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾದ ಹಿನ್ನಲೆ ಮುಂಬೈ ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.
ಹೋಟೆಲ್ ಉದ್ಯಮಿ ಸುನಿಲ್ ಶೆಟ್ಟಿ ಮೃತ ದುರ್ದೈವಿಯಾಗಿದ್ದಾರೆ. ಕಾರ್ಕಳ ಹಿರ್ಗಾನ ದ ಕೃಷ್ಣ ಬೆಟ್ಟುನಲ್ಲಿರುವ ಸ್ವಂತ ಮನೆಯಲ್ಲಿ ಸುನೀಲ್ ಅವರು ನಾಡ ಕೋವಿಯಿಂದ ತಲೆಗೆ ಗುಂಡು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹಾರಾಷ್ಟ್ರದ ಪೂನಾದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ 45 ವರ್ಷದ ಸುನಿಲ್ ಕೋರೋನಾದ ಕಾರಣ ಉದ್ಯಮದಲ್ಲಿ ವಿಪರೀತ ನಷ್ಟ ಅನುಭವಿಸಿದ್ದರು ಎನ್ನಲಾಗಿದೆ.
ಆರ್ಥಿಕ ನಷ್ಟದಿಂದ ಖಿನ್ನತೆಗೆ ಒಳಗಾಗಿದ್ದ ಸುನಿಲ್ ಶೆಟ್ಟಿ ಆತ್ಮಹತ್ಯೆ ಮೂಲಕ ತನ್ನ ಜೀವನವನ್ನೇ ಕೊನೆಗೊಳಿಸಿದ್ದಾರೆ ಎನ್ನಲಾಗಿದ್ದು. ಕಾರ್ಕಳ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Facebook Comments
You may like
-
ಒಂದೆರಡು ದಿನಗಳಲ್ಲಿ ಎಲ್ಲಾ ಭಿನ್ನಮತ ಶಮನ – ಬಿವೈ ರಾಘವೇಂದ್ರ
-
ಡ್ರೋಣ್ ಮೂಲಕ ಮದುಮಗನ ಕೈಗೆ ಬಂತು ಮಾಂಗಲ್ಯ ಸರ…!!
-
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯ ಆರಂಭ
-
ಬಾರ್ಕೂರಿನಲ್ಲಿ ಶ್ರೀ ಕುಮಾರಸ್ವಾಮಿ ಮೂರ್ತಿಯ ಮೇಲೆ ಹರಿದಾಡಿದ ಸರ್ಪ
-
ಕೂಲಿ ಕಾರ್ಮಿಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿದ ಕರಡಿ
-
ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ: ಆತ್ಮಹತ್ಯೆ ಶಂಕೆ
You must be logged in to post a comment Login