Connect with us

    LATEST NEWS

    ಉಡುಪಿ – ನಾಯಿಯ ಶವವನ್ನು ಸ್ಕೂಟರ್ ಗೆ ಕಟ್ಟಿ ಎಳೆದುಕೊಂಡ ಹೊದ ವ್ಯಕ್ತಿ

    ಕಾರ್ಕಳ ಜುಲೈ 20: ವ್ಯಕ್ತಿಯೊಬ್ಬ ಸತ್ತ ನಾಯಿಯನ್ನು ಸ್ಕೂಟರ್ ಗೆ ಕಟ್ಟಿಕೊಂಡು ಎಳೆದೊಯ್ದ ಘಟನೆ ಶಿರ್ವ ಮುಖ್ಯ ರಸ್ತೆಯಲ್ಲಿ ನಡೆದಿದ್ದು, ಇದೀಗ ಘಟನೆಯ ವಿಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

    ಈ ಅಮಾನವೀಯ ಕೃತ್ಯ ನಡೆಸಿದ ವ್ಯಕ್ತಿ ಕೊಂಬಗುಡ್ಡೆಯ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ.

    ಕೊಂಬಗುಡ್ಡೆಯ ನಿವಾಸಿ ಖಾದ‌ರ್, ಮೃತಪಟ್ಟ ನಾಯಿಯ ಕೊರಳಿಗೆ ಸರಪಳಿ ಹಾಕಿ, ಸ್ಕೂಟರ್‌ನ ಸೀಟಿಗೆ ಸರಪಳಿ ​​ಕಟ್ಟಿಕೊಂಡು ಕೊಂಬಗುಡ್ಡೆಯಿಂದ ಶಿರ್ವ ಪೇಟೆಯವರೆಗೆ ಎಳೆದೊಯ್ದು ವಿಕೃತಿ ಮೆರೆದಿದ್ದಾನೆ.

    ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಶಿರ್ವ ಪೊಲೀಸರು ಆರೋಪಿ ಖಾದ‌ರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply