Connect with us

    BELTHANGADI

    ಬೆಳ್ತಂಗಡಿ : ಧರ್ಮಸ್ಥಳ, ಸುಬ್ರಹ್ಮಣ್ಯ ಕೇತ್ರದರ್ಶನಕ್ಕೆ ಬಂದ ವ್ಯಕ್ತಿ ಹೃದಯಾಘಾತಕ್ಕೆ ಬಲಿ..!

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಕುಕ್ಕೆ ಸುಬ್ರಹ್ಮಣ್ಯದತ್ತ ತೆರಳುತ್ತಿದ್ದ ವೇಳೆ ಯಾತ್ರಾರ್ಥಿಗೆ ಎದೆನೋವು ಕಾಣಿಸಿಕೊಂಡು ಬಳಿಕ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

    ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಕುಕ್ಕೆ ಸುಬ್ರಹ್ಮಣ್ಯದತ್ತ ತೆರಳುತ್ತಿದ್ದ ವೇಳೆ ಯಾತ್ರಾರ್ಥಿಗೆ ಎದೆನೋವು ಕಾಣಿಸಿಕೊಂಡು ಬಳಿಕ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

    ಬೀದರ್ ಜಿಲ್ಲೆಯ ಹಮನಬಾದ್ ತಾಲೂಕಿನ ಧೂಮನಸೂರ ಗ್ರಾಮದ ನಾಗರಾಜ್ (36ವರ್ಷ) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

    ಅ.10 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಬಂದವರು ಅಲ್ಲಿಂದ ಸ್ನೇಹಿತರ ಜೊತೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುತ್ತಿದ್ದ ಸಮಯ ದಾರಿ ಮಧ್ಯೆ ಎದೆನೋವು ಆಗುತ್ತಿರುವುದಾಗಿ ತಿಳಿಸಿದಂತೆ ಸ್ನೇಹಿತರು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.

    ಅಲ್ಲಿನ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ವೊಂದರಲ್ಲಿ ಕರೆತಂದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಚಿಕಿತ್ಸೆ ಬಗ್ಗೆ ಕರೆದುಕೊಂಡು ಬರುವಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

    ಈ ಬಗ್ಗೆ ಮೃತರ ತಾಯಿ ಸುಶೀಲಾಬಾಯಿ ಎಂಬವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆ UDR NO 72/2023 ಕಲಂ: 174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply