LATEST NEWS
ದೇಯಿಬೈದೆದಿ ಪುತ್ಥಳಿಯೊಂದಿಗೆ ಅಶ್ಲೀಲ ಚಿತ್ರ – ಆರೋಪಿ ಪೊಲೀಸರ ವಶ
ಪುತ್ತೂರು ಸೆಪ್ಟೆಂಬರ್ 10 : ತುಳುನಾಡಿನ ಕಾರ್ಣಿಕ ಪುರುಷರು ಹಾಗೂ ವೀರ ಪುರುಷರಾದ ಕೋಟಿ-ಚೆನ್ನಯ್ಯ ರ ಜನ್ಮಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಡುಮಲೆಯಲ್ಲಿ ಕೋಟಿ-ಚೆನ್ನಯರ ತಾಯಿ ದೇಯಿಬೈದೆದಿ ಪುತ್ಥಳಿಯೊಂದಿಗೆ ಅಶ್ಲೀಲ ಚಿತ್ರ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಈಶ್ವರಮಂಗಲದ ಹನೀಫ್ ಬಂಧನಕ್ಕೊಳಗಾದ ಆರೋಪಿ. ಈತ ಅರಣ್ಯ ಇಲಾಖೆಯು ನಿರ್ಮಿಸಿರುವ ಔಷಧೀಯ ವನದಲ್ಲಿ ನಿರ್ಮಿಸಿರುವ ದೇಯಿ ಬೈದೆದಿಯ ಪುತ್ಥಳಿಯ ಪಕ್ಕದಲ್ಲಿ ಕೂತು ಪುತ್ಥಳಿಯೊಂದಿಗೆ ಅಶ್ಲೀಲ ಚಿತ್ರವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ. ಇದರ ವಿರುದ್ದ ಬಿಲ್ಲವ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿತ್ತು.
ಅಲ್ಲದೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ದೇಯಿಬೈದೆದಿ ಪುತ್ಥಳಿ ಬಳಿ ಅಶ್ಲೀಲ ಚಿತ್ರ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ಚಿತ್ರದಲ್ಲಿರುವ ವ್ಯಕ್ತಿಯ ಮೇಲೆ ಕ್ರಮ ಜರುಗಿಸುವಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಈಶ್ವರ ಮಂಗಲದ ಹನೀಫ್ ನನ್ನು ಸಂಪ್ಯ ಪೋಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಹನೀಫ್ ನ ಮೇಲೆ ಧಾರ್ಮಿಕ ಭಾವನೆಗೆ ಧಕ್ಕೆ ಹಾಗೂ ಜಾಲತಾಣದ ದುರ್ಬಳಕೆ ಸಂಬಂಧಿಸಿದ ಕೇಸನ್ನು ದಾಖಲಿಸಿದ್ದಾರೆ.
You must be logged in to post a comment Login