Connect with us

    KARNATAKA

    ಲೋಕಾಯುಕ್ತಾ ದಾಳಿ ನಡೆದಿದ್ದ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಸೂಸೈಡ್..!

    ಚಿಕ್ಕಮಗಳೂರು : ಕೆಲ ದಿನಗಳ ಹಿಂದೆ ಲೋಕಾಯುಕ್ತಾ ದಾಳಿ ನಡೆದಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮೂಡಿಗೆರೆ BEO ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57)  ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.  ಡೆತ್ ನೋಟ್  ಬರೆದಿಟ್ಟು ನಿಂಗಯ್ಯ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡೂರು ಮೂಲದ ಮೃತ ನಿಂಗನಾಯಕ್ ಅವರು ಕಳೆದ ಎರಡು ವರ್ಷಗಳಿಂದ ಮೂಡಿಗೆರೆ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.  ವಾರದ ಹಿಂದಷ್ಟೇ BEO ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು. ಆಗ ಹತ್ತು ಸಾವಿರ ಹಣ ಪಡೆಯುತ್ತಿದ್ದ BEO ಹೇಮಂತ್ ರಾಜ್ ಸಿಕ್ಕಿಬಿದ್ದಿದ್ದರು. ಈ ಘಟನೆ ನಡೆದ ವಾರಕ್ಕೆ ನಿಂಗರಾಜ್ ಆತ್ಯಹತ್ಯೆಗೆ ಶರಣಾಗಿದ್ದಾರೆ. ಸದ್ಯ ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply