Connect with us

KARNATAKA

ಮಂಡ್ಯ – ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರು – ಮೂವರ ಸಾವು

ಮಂಡ್ಯ, ಫೆಬ್ರವರಿ4: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಹಳ್ಳಕ್ಕೆ ಬಿದ್ದು ಕಾರಿನಲ್ಲಿ ಮೂವರು ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಿನ್ನೆ ತಡರಾತ್ರಿ ನಡೆದಿದೆ.


ಮೃತರನ್ನು ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್ (30), ಪವನ್ ಶೆಟ್ಟಿ (32) ಹಾಗೂ ಚಿರಂಜೀವಿ (32) ಮೃತಪಟ್ಟವರಾಗಿದ್ದು, ಘಟನೆಯಲ್ಲಿ ಸಾಗರ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಕೆ.ಆರ್.ಪೇಟೆಯಿಂದ ಅಕ್ಕಿಹೆಬ್ಬಾಳು ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *