Connect with us

KARNATAKA

ಮಂಡ್ಯ – ವಿಸಿ ನಾಲೆಗೆ ಬಿದ್ದ ಕಾರು – ಐವರು ಜಲಸಮಾಧಿ

ಮಂಡ್ಯ ನವೆಂಬರ್ 07:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿಸಿ ನಾಲೆಗೆ ಬಿದ್ದು ಕಾರಿನಲ್ಲಿ ಐವರು ಜಲಸಮಾಧಿಯಾದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನಘಟ್ಟದ ಬಳಿ ನಡೆದಿದೆ.


ಮೈಸೂರು ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ವಿಸಿ ನಾಲೆಗೆ ಬಿದ್ದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಕಾರನ್ನು ಹೊರ ತೆಗೆದಿದ್ದು, ಕಾರಿನಲ್ಲಿ ಐವರ ಮೃತದೇಹಗಳು ಪತ್ತೆಯಾಗಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಕಾರು ಎದುರಿಗೆ ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆಯಬೇಕಿತ್ತು. ಇದನ್ನು ತಪ್ಪಿಸಲು ಹೋಗಿ ಕಾರು ನಾಲೆಗೆ ಬಿದ್ದಿದೆ ಎಂದು ಮಂಡ್ಯ ಎಸ್.ಪಿ ಯತೀಶ್ ಹೇಳಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *