Connect with us

    FILM

    ಧಾರವಾಹಿ ಶೂಟಿಂಗ್ ವೇಳೆ ಬಿದ್ದು ಗಂಭೀರವಾಗಿ ಗಾಯಗೊಂಡ ನಟ ಮಂಡ್ಯ ರಮೇಶ್

    ಬೆಂಗಳೂರು ನವೆಂಬರ್ 30: ಹಿರಿಯ ನಟ ರಂಗಕರ್ಮಿ ಮಂಡ್ಯ ರಮೇಶ್ ಅವರು ಚಿತ್ರೀಕರಣದ ವೇಳೆ ಬಿದ್ದು ಗಂಭಿರವಾಗಿ ಗಾಯಗೊಂಡಿದ್ದಾರೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


    ನಟ ರಮೇಶ್ ಅರವಿಂದ್ ನಿರ್ಮಾಣ ಮಾಡುತ್ತಿರುವ ಆಸೆ ಧಾರವಾಹಿ ಶೂಟಿಂಗ್ ಬೆಂಗಳೂರಿನ ರಾಜರಾಜೇಶ್ವರಿ ನಗರದ ಹೊರಭಾಗದಲ್ಲಿರುವ ಕಲ್ಲು ಕ್ವಾರಿಯ ಬಳಿ ನಡೆಯುತ್ತಿತ್ತು, ಈ ವೇಳೆ ದುರ್ಘಟನೆ ನಡೆದಿದೆ. ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದಾರೆ. ಘಟನೆಯಲ್ಲಿ ನಟ ಮಂಡ್ಯ ರಮೇಶ್​ ಅವರ ಕಾಲು ಮತ್ತು ಮುಂಗೈ ಮುರಿತವಾಗಿದೆ ಎಂದು ವರದಿಯಾಗಿದೆ.

    ಕಲ್ಲು ಕ್ವಾರಿಯಲ್ಲಿ ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರು ಕಾಲಿಗೆ ಎರಡು ಆಪರೇಷನ್ ಮಾಡಿದ್ದಾರೆ ಎಂದು ವರದಿಯಾಗಿದೆ. ಶೂಟಿಂಗ್​ ಸ್ಥಳದಲ್ಲಿ ಮೇಲಿಂದ ಬಿದ್ದ ಕಾರಣ ಮುಂಗೈ ಮತ್ತು ಬಲಗಾಲಿಗೆ ತೀವ್ರಗಾಯವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ. ರಮೇಶ್ ಅರವಿಂದ್ ನಿರ್ಮಾಣದ ‘ಆಸೆ’ ಕನ್ನಡದ ಸ್ಟಾರ್ ಸುವರ್ಣದಲ್ಲಿ ‘ಆಸೆ’ ಧಾರಾವಾಹಿ ಪ್ರಸಾರವಾಗಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply