Connect with us

    DAKSHINA KANNADA

    ಮಂಗಳೂರು: ತಂಡದಿಂದಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ

    ಮಂಗಳೂರು, ಆಗಸ್ಟ್ 20: ನಗರದ ಹೊರವಲಯದ ವಳಚ್ಚಿಲ್‌ನಲ್ಲಿ ತಂಡವೊಂದು ಯುವಕನನ್ನು ಮಾರಕಾಸ್ತ್ರಗಳಿಂದ ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆರೋಪಿಗಳನ್ನು ಮಿಸ್ತಾ, ಮನ್ಸೂರು ಯಾನೆ ಹುಸೈನ್ ಹಾಗೂ ಆಶಿಕ್ ಎಂದುಇ ಗುರುತಿಸಲಾಗಿದೆ. ನಿನ್ನೆ ರಾತ್ರಿ ಮನೆಗೆ ಸಾಮಾನು ತರಲು ಅಂಗಡಿಗೆ ತೆರಳಿದ್ದ ಬಾಲಕ ಮಿಫ್ತಾಹ್ ಎಂಬ ಬಾಲಕನನ್ನು ತಂಡವೊಂದು ತಡೆದಿದೆ. ಇದನ್ನು ಪ್ರಶ್ನಿಸಲು ಬಂದ ಬಾಲಕನ ಮಾವ ಆಸೀಫ್ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದೆ.

    ಘಟನೆಯಲ್ಲಿ ಆಸೀಫ್ ಗಂಭೀರ ಗಾಯಗೊಂಡಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ದಾಖಲಾಗಿದ್ದಾರೆ. ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಗಾಂಜಾ ಸೇವಿಸಿದ್ದರು ಎಂದು ಹೇಳುತ್ತಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

    ಘಟನೆ ಹಿನ್ನೆಲೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಆರೋಪಿಗಳ ವಿರುದ್ಧ ಈ ಹಿಂದೆ ಹಲವು ಠಾಣೆಗಳಲ್ಲಿ ಕಳವು, ಕೊಲೆ, ದರೋಡೆ ಪ್ರಕರಣ ದಾಖಲಾಗಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply