LATEST NEWS
ದಕ್ಷಿಣಕನ್ನಡ ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವಾರಣದ ಜೊತೆ ತುಂತುರು ಮಳೆ ಸಾಧ್ಯತೆ

ಮಂಗಳೂರು ಮಾರ್ಚ್ 05: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣದೊಂದಿಗೆ, ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಗಾಳಿ ಅಬ್ಬರ ಜೋರಾಗಿದ್ದು, ಇದರಿಂದಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕೆಲವು ದಿನಗಳಿಂದ ಭಾರೀ ಬಿಸಿಲಿನ ಉರಿಯಿಂದಾಗಿ ಮೋಡಗಳು ಸೃಷ್ಟಿಯಾಗುತ್ತಿವೆ. ಕೆಲವು ದಿನಗಳ ಹಿಂದೆ ಕೆಲವೆಡೆ ಸಾಧಾರಣ ಮಳೆ ಸುರಿಯಲು ಆರಂಭವಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ್ಥಳೀಯವಾಗಿ ಮೋಡ ಉಂಟಾಗಿ ಸದ್ಯವೇ ಮಳೆಯಾಗುವ ಸಾಧ್ಯತೆ ಇದೆ. ಬಳಿಕ ಗರಿಷ್ಠ ಉಷ್ಣಾಂಶವೂ ತುಸು ಕಡಿಮೆಯಾಗಲಿದೆ ಎನ್ನುತ್ತದೆ ಹವಾಮಾನ ಇಲಾಖೆ.
ಇಂದು ಮುಂಜಾನೆಯಿಂದಲೇ ಮಂಗಳೂರಿನಲ್ಲಿ ಮೋಡ ಕವಿದ ವಾತವಾರಣವಿತ್ತು.

1 Comment