Connect with us

    DAKSHINA KANNADA

    ಮಂಗಳೂರು : ಈ ಬಾರಿ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಾ ಯಾತ್ರೆಯಲ್ಲಿ D.J., ನಾಸಿಕ ಬ್ಯಾಂಡ್ ಗಳಿಗೆ ನಿಷೇಧ..!

    ಮಂಗಳೂರು : 102ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ  ಆರಂಭವಾಗಲಿದ್ದು ಈ ಬಾರಿ ಶ್ರೀ  ಶಾರದಾ ಮಾತೆಯ ವಿಸರ್ಜನಾ ಶೋಭಾ ಯಾತ್ರೆಯಲ್ಲಿ D.J., ನಾಸಿಕ ಬ್ಯಾಂಡ್ ಗಳಿಗೆ ನಿಷೇಧ ಹೇರಿ ಶ್ರೀ ಶಾರದಾ ಮಹೋತ್ಸವ ಸಮಿತಿ ನಿರ್ಣಯ ಕೈಗೊಂಡಿದೆ.

    File Photo

    ಮಂಗಳೂರು ಶ್ರೀ ವೆಂಕಟರಮಣ ದೇವಾಲಯದ ಆಚಾಯರ ಮಠ ವಠಾರದಲ್ಲಿರುವ ವಸಂತ ಮಂಟಪದಲ್ಲಿ 102ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ಆಕ್ಟೋಬರ್ 8ರಿಂದ ಆರಂಭಗೊಂಡು 14ವರೆಗೆ ಅತ್ಯಂತ ವೈಭವಯುತವಾಗಿ ನಡೆಯಲಿದೆ.
    2 ವರ್ಷದ ಹಿಂದೆಯಷ್ಟೇ ನೂರನೇ ವರ್ಷದ ಶಾರದಾ ಮಹೋತ್ಸವವನ್ನು ಶ್ರೀ ಶಾರದಾ ಮಹೋತ್ಸವ ಸಮಿತಿ ಅತ್ಯಂತ ವೈಭವಪೂರ್ಣವಾಗಿ ನಡೆಸಿತ್ತು. ಅದೇ ರೀತಿ ಸಂಭ್ರಮದಿಂದ ಈ ಮಹೋತ್ಸವನ್ನು ಶ್ರಧ್ಧ ಭಕ್ತಿಯಿಂದ ನಡೆಸಿಕೊಂಡು ಬರಲಾಗುತ್ತಿದೆ. ಮಂಗಳೂರು ನಗರ ಹಾಗೂ ಪರವೂರಿನ ಭಕ್ತಾದಿಗಳು ತನುಮನ ಸಹಾಯ ನೀಡಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ಸಿಗೊಳಿಸುತ್ತಿದ್ದಾರೆ.
    ಆಕ್ಟೋಬರ್ 8ರಂದು ರಾತ್ರಿ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ರಾಜಾಂಗಣದಿಂದ ಶ್ರೀ ಉಮಾಮಹೇಶ್ವರ ದೇವಳ ರಸ್ತೆ , ರಾಮಮಂದಿರ , ನಂದಾ ದೀಪ ರಸ್ತೆ , ಹೂಮಾರುಕಟ್ಟೆ ರಸ್ತೆ , ರಥಬೀದಿಯಾಗಿ ಉತ್ಸವಸ್ಥಾನಕ್ಕೆ ತರಲಾಗುವುದು.
    ಆ.9ರಂದು ಬೆಳಗ್ಗೆ 7 ಗಂಟೆಗೆ ಪ್ರತಿಷ್ಠಾಪನೆ ನಡೆಯಲಿದೆ. ಆ 13ವರೆಗೆ ದೀಪಾಂಲಕಾರ ಸಹಿತ ರಂಗಪೂಜೆ ನಡೆಯಲಿದೆ . ಪ್ರತಿ ದಿನವೂ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಶ್ರೀ ಶಾರದಾ ಮಾತೆಯ ದರುಶನವನ್ನು ಪಡೆದುಕೊಳ್ಳಬಹುದು.
    ಆ13ರಂದು ಶ್ರೀ ಕಾಳಿಕಾ ದೇವಿಯ ವಿಶೇಷ ಅಲಂಕಾರ ಮಾಡಲಾಗುವುದು. ಅಂದು ಬೆಳಗ್ಗೆ 10 ಘಂಟೆಗೆ ವಿದ್ಯಾರಂಭ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ 6 ಗಂಟೆಗೆ ವಿಶೇಷ ದೀಪಾಲಂಕಾರ ಸೇವೆ ಜರಗಲಿದೆ.
    ಆ.14ರಂದು ಸಂಜೆ 5 ಗಂಟೆಗೆ ಶ್ರೀ ಶಾರದಾ ಮಾತೆಗೆ ಪೂರ್ಣಾಲಂಕಾರ ನಡೆಯಲಿದೆ. ಅಂದು ರಾತ್ರಿ 8 ಗಂಟೆಗೆ ಶ್ರೀ ಶಾರದಾ ಮಾತೆಯ ವಿಸರ್ಜನೆಯ ಬೃಹತ್ ಶೋಭಾ ಯಾತ್ರೆ ನಡೆಯಲಿದೆ. ಉತ್ಸವ ಸ್ಥಾನದಿಂದ ಹೊರಡುವ ಮರವಣಿಗೆ ಶ್ರೀ ಮಹಾಮಾಯಿ ದೇವಾಲಯವಾಗಿ, ಕೆನರಾ ಹೈಸ್ಕೂಲಿನ ಹಿಂಬದಿಯಿಂದ ಮಂಜೇಶ್ವರ ಗೋವಿಂದ ಪೈಯ ವೃತ್ತ ತಲುಪಿ ಅಲ್ಲಿಂದ ಡೊಂಗರಕೇರಿಯ ಮೂಲಕ ನ್ಯೂಚಿತ್ರಾ ಟಾಕೀಸ್ , ಬಸವನಗುಡಿ , ಚಾಮರಗಲ್ಲಿ , ರಥ ಬೀದಿಯಾಗಿ ಶ್ರೀ ಮಹಾಮಾಯಿ ತೀರ್ಥದಲ್ಲಿ ಸಮಾಪನಗೊಳ್ಳಲಿದೆ.ಈ ಮಹೋತ್ಸವದಲ್ಲಿ ಪ್ರತಿ ದಿನವೂ ಸಹಸ್ರಾರು ಭಕ್ತಾದಿಗಳು ಪಾಲ್ಗೊಳ್ಳಲಿದ್ದು , ದೇವಿಯ ಅಶೀರ್ವಾದ ಪಡೆಯುತ್ತಾರೆ.ಭಕ್ತಾದಿಗಳು ಸೇವಾ ಕೌಂಟರ್‌ಗಳಲ್ಲಿ ಸೇವೆಗೆ ಹೆಸರು ನೊಂದಾಯಿಸಲು ಅವಕಾಶಗಳಿವೆ.ಆ 9ರಿಂದ 13ವರೆಗೆ ಪ್ರತಿದಿನವೂ ರಾತ್ರಿ 7 ಗಂಟೆಯಿಂದ 9 ಗಂಟೆವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿವೆ.ಆ10ರಂದು ರಾತ್ರಿ 8 ಘಂಟೆಗೆ ದುರ್ಗಾ ನಮಸ್ಕಾರ ಸೇವೆ ನಡೆಯಲಿದೆ. ಅದಾದ ಬಳಿಕ 8.30ರಿಂದ 10 ಗಂಟೆವರೆಗೆ ಸಾರ್ವಜನಿಕ ಅನ್ನ ಸಂತರ್ಪಣೆಯೂ ಜರಗಲಿದೆ.

    ಈ ಬಾರಿ ಶ್ರೀ ಶಾರದಾ ಮಾತೆಯ ವಿಸರ್ಜನಾ ಮಹೋತ್ಸವದ ಶೋಭಾ ಯಾತ್ರೆಯಲ್ಲಿ ಯಾವುದೇ D.J. ಹಾಗೂ ನಾಸಿಕ ಬ್ಯಾಂಡ್ ಗಳಿಗೆ ಭಾಗವಹಿಸಲು ಅವಕಾಶವಿಲ್ಲವೆಂದು ಸಮಿತಿಯು ನಿರ್ಧರಿಸಿದೆ. ಇದರ ಬಗ್ಗೆ ಸಂಭಂದಪಟ್ಟ ಉತ್ಸವದಲ್ಲಿ ಭಾಗವಹಿಸುವ ವೇಷಧಾರಿಗಳ ಯಾ ಇತರ ಕಲಾ ತಂಡಗಳಿಗೆ ಮೊದಲೇ ತಿಳಿಸಲಾಗುವುದು. ಶೋಭಾ ಯಾತ್ರೆಯಲ್ಲಿ ಭಾಗವಹಿಸುವ ವೇಷಧಾರಿ ಹಾಗೂ ಕಲಾ ತಂಡಗಳ ಟ್ಯಾಬ್ಲೋಗಳು ಖಡ್ಡಾಯವಾಗಿ ಭವಂತಿ ರಸ್ತೆ ಮತ್ತು ರಥ ಬೀದಿಯ ಒಂದು ಬದಿಯಲ್ಲಿ ಗಂಟೆ 7.45ರ ಒಳಗೆ ತಮಗೆ ಕೊಟ್ಟ ಅನುಕ್ರಮಣಿಕೆಯಂತೆ ನಿಂತು ಉತ್ಸವದ ಸ್ಠಾನದಿಂದಲೇ ಹೊರಡುವುದು.

    ದೇವಿಗೆ ಅರ್ಪಿತವಾದ ಸೀರೆಗಳ ಏಲಂ ಆ20ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಶಾರದಾ ಮಾತೆಗೆ ಅಲಂಕರಿಸಿ ಸೀರೆಗಳನ್ನು ಪಡೆದುಕೊಳ್ಳಲು ಭಕ್ತಾದಿಗಳಿಗೆ ಅಂದು ಅವಕಾಶ ಇದೆ ಎಂದು ಶ್ರೀ ಶಾರದಾ ಮಹೋತ್ಸವ ಸಮಿತಿ (ರಿ) ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply