Connect with us

DAKSHINA KANNADA

ಗೂಗಲ್​ ಮ್ಯಾಪ್​ ನಂಬಿ ಕೆಸರಿನಲ್ಲಿ ಸಿಲುಕಿದ ಮಂಗಳೂರಿನ ಅಯ್ಯಪ್ಪ ಭಕ್ತನ ಮಧ್ಯರಾತ್ರಿ ರಕ್ಷಿಸಿದ ತಮಿಳುನಾಡು ಪೊಲೀಸರು..!

ವಟ್ಟಲಕುಂಡು, ಕೇರಳ:  ಗೂಗಲ್​ ಮ್ಯಾಪ್​ ನಂಬಿ ಹೋಗಿ ಕೆಸರಿನಲ್ಲಿ ಸಿಲುಕಿದ ಮಂಗಳೂರಿನ ಅಯ್ಯಪ್ಪ ಭಕ್ತನ ಮಧ್ಯರಾತ್ರಿ ತಮಿಳು ನಾಡು ಪೊಲೀಸರು ರಕ್ಷಣೆ ಮಾಡಿ ಮಾನವೀಯತೆ ತೋರಿದ ಘಟನೆ ನಡೆದಿದೆ.  ತಮಿಳುನಾಡು ಪೊಲೀಸರ ಈ ಕಾರ್ಯಕ್ಕೆ ಕರ್ನಾಟಕ ಪೊಲೀಸರು  ಮೆಚ್ಚುಗೆ ವ್ಯಕ್ತಪಡಿಸಿದ  ಕೃತಜ್ಞತೆ ಸಲ್ಲಿಸಿದ್ದಾರೆ.

ಶಬರಿಮಲೆ ಅಯ್ಯಪ್ಪ ದರ್ಶನ ಮುಗಿಸಿ ಗೂಗಲ್​ ಮ್ಯಾಪ್​ ಸಹಾಯದಿಂದ ಮಂಗಳೂರು ತಲುಪಲು ಮುಂದಾಗಿದ್ದ ಮಂಗಳೂರು ಮೂಲದ  ವಿಕಲ ಚೇತನ  ಅಯ್ಯಪ್ಪ ಭಕ್ತರೊಬ್ಬರು 7 ಗಂಟೆಗಳ ಕಾಲ ಕೆಸರಿನಲ್ಲಿ ಸಿಲುಕಿಕೊಂಡಿದ್ದು, ಕಡೆಗೆ ಪೊಲೀಸರು ಅವರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಮಂಗಳೂರು ಮೂಲದ ತಮಿಳುನಾಡು ಪೊಲೀಸರು ಎಂಬ ವಿಕಲ ಚೇತನ ಯುವಕ ಶಬರಿ ಮಲೆ ದರ್ಶನಕ್ಕೆ ತೆರಳಿದ್ದರು. ವಿಕಲಚೇತನರಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಿದ್ದ ದ್ವಿಚಕ್ರ ವಾಹನದಲ್ಲಿ ಏಕಾಂಗಿಯಾಗಿ ಅವರು ಮಂಗಳೂರಿನಿಂದ ಶಬರಿಮಲೆಗೆ ತೆರಳಿ ಅಲ್ಲಿ ಅಯ್ಯಪ್ಪನ ದರ್ಶನ ಮುಗಿಸಿ ಭಾನುವಾರ ನಗರಕ್ಕೆ ಮರಳುತ್ತಿದ್ದರು. ಮರಳುವಾಗ ಶೀಘ್ರ ಮನೆ ತಲುಪಬೇಕು ಎಂದು ಅವರು ಗೂಗಲ್​ ಮ್ಯಾಪ್​ ಮೊರೆ ಹೋಗಿದ್ದಾರೆ.

ಈ ವೇಳೆ, ಗೂಗಲ್​ ಮ್ಯಾಪ್​ ಅಡ್ಡ ದಾರಿಯೊಂದನ್ನು ತೋರಿಸಿದೆ. ಭಾನುವಾರ ಸಂಜೆ 7ಕ್ಕೆ ದಿಂಡಿಗಲ್​​ ಜಿಲ್ಲೆಯ ವಟ್ಟಲಕುಂದು ಪಕ್ಕದ ಎಂ.ವಾಡಿಪ್ಪತಿ ಪ್ರದೇಶ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸಾಗಬೇಕಿದ್ದ ಅವರ ಮಾರ್ಗ ತಪ್ಪಿ, ಸಮುದ್ರ ಕಣ್ಮಾಯಿಗೆ ತೆರಳುವ ರಸ್ತೆಗೆ ಹೋಗಿದ್ದಾರೆ. ಅಲ್ಲಿ ಸೇತುವೆ ದಾಟಿದ ಬಳಿಕ ಅನಿರೀಕ್ಷಿತವಾಗಿ ಕಣ್ಮಾಯಿ ಪ್ರದೇಶದಲ್ಲಿ ಕೆಸರಿನಲ್ಲಿ ಸಿಲುಕಿಕೊಂಡಿದ್ದಾರೆ. ಈ ವೇಳೆ ಮಳೆ ಅಬ್ಬರ ಕೂಡ ಹೆಚ್ಚಾಗಿದ್ದು, ಅಲ್ಲಿಯೇ ಏಳು ಗಂಟೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಸುತ್ತಮುತ್ತ ಯಾರೂ ಇಲ್ಲದ ಕಾರಣ ಅವರ ಸಹಾಯಕ್ಕೆ ಕೂಡ ಯಾರು ನೆರವಾಗಲಿಲ್ಲ. ಏಳು ಗಂಟೆಗಳ ಕಾಲ ಕೆಸರಿನಲ್ಲಿ ಸಿಲುಕಿ ಮೇಲೆ ಬರಲು ಸಾಧ್ಯವಾಗದೇ ಒದ್ದಾಡಿದ ಅವರು, ಕಡೆಗೆ ದಿಕ್ಕು ತೋಚದೇ ಕರ್ನಾಟಕದ ಪೊಲೀಸರಿಗೆ ಕರೆ ಮಾಡಿ ಅವರ ಸಹಾಯದಿಂದ ಸಂಬಂಧಿಕರಿಗೂ ವಿಷಯ ಮುಟ್ಟಿಸಿದ್ದಾರೆ. ಕಡೆಗೆ ಕರ್ನಾಟಕ ಪೊಲೀಸರು ದಿಂಡಿಗಲ್​ ಪೊಲೀಸ್​ ಕಂಟ್ರೋಲ್​ ರೂಮ್​ಗೆ ವಿಷಯ ಮುಟ್ಟಿಸಿದ್ದಾರೆ.

ಕಡೆಗೆ ದಿಂಡಿಗಲ್​ ಪೊಲೀಸರು ಮಧ್ಯರಾತ್ರಿ ಸುಮಾರು 2 ಗಂಟೆಗೆ ಸುರಿರುತ್ತಿರುವ ಮಳೆ ಮಧ್ಯೆ ಯುವಕನ ಸಹಾಯಕ್ಕೆ ಧಾವಿಸಿದ್ದಾರೆ. ದಿಂಡಿಗಲ್ ಜಿಲ್ಲೆಯ ವಟ್ಟಲಕುಂದು ಬಳಿಯಿರುವ ಎಂ.ವಾಡಿಪ್ಪಟಿ ಸಮುದ್ರಂ ಕಣ್ಮಾಯಿ ಪ್ರದೇಶಕ್ಕೆ ತೆರಳಿ ಆತನನ್ನು ಹುಡುಕಿ ರಕ್ಷಣೆ ಮಾಡಿದ್ದಾರೆ. ತಕ್ಷಣ ಅವರಿಗೆ ಆಹಾರ ವ್ಯವಸ್ಥೆ ಮಾಡಿ, ಮರು ದಿನ ಬೆಳಗ್ಗೆ ಅವರನ್ನು ಸುರಕ್ಷಿತವಾಗಿ ಮನೆಗೆ ತಲುಪುವ ವ್ಯವಸ್ಥೆ ಮಾಡಿದ್ದಾರೆ. ತಮಿಳುನಾಡು ಪೊಲೀಸರ ಈ ಸಹಾಯಕ್ಕೆ ಕರ್ನಾಟಕ ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿ, ಧನ್ಯವಾದವನ್ನು ಅರ್ಪಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *