Connect with us

LATEST NEWS

ಮಂಗಳೂರು – ಮೊಬೈಲ್ ಬಳಕೆ ವಿಚಾರದಲ್ಲಿ ಮನೆಯಲ್ಲಿ ಬೈದಿದ್ದಕ್ಕೆ ಬಾಲಕ ಆತ್ಮಹತ್ಯೆ

ಮಂಗಳೂರು ಜನವರಿ 31:ಯಾವಾಗಲೂ ಮೊಬೈಲ್ ಬಳಸುತ್ತಿದ್ದ ಮಗನಿಗೆ ತಾಯಿ ಬೈದಿದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಕುಲಶೇಖರ ಕೋಟಿಮುರ ಅಪಾರ್ಟ್ ಒಂದಲ್ಲಿ ನಡೆದಿದೆ.


ಜಗದೀಶ್ ಹಾಗೂ ವಿನಯ ದಂಪತಿಗಳ ಮಗನಾದ 14 ವರ್ಷದ ಜ್ಞಾನೇಶ್ ಮೃತ ಬಾಲಕನಾಗಿದ್ದಾನೆ. ಮೊಬೈಲ್ ಬಳಸುವ ವಿಚಾರವಾಗಿ ಮನೆಯಲ್ಲಿ ತಾಯಿಯವರು ಸ್ವಲ್ಪ ಗದರಿಸಿದರು ಎಂಬ ಕಾರಣಕ್ಕೆ ಬೇಸರದಲ್ಲಿದ್ದು ನಂತರ ತಾನು ಸ್ನಾನ ಮಾಡಿ ಬರುವುದಾಗಿ ಹೇಳಿ ರೂಮಿನೊಳಗೆ ಹೋದವನು ಬಾರದಿದ್ದಾಗ ತಂದೆಯವರಾದ ಜಗದೀಶ್ ರವರು ಬಾತ್ ರೂಂ ಬಳಿಯಿರುವ ಕಿಟಕಿಯ ಮೂಲಕ ರೂಮಿನೊಳಗೆ ಹೋಗಿ ನೋಡಿದಾಗ ಜ್ಞಾನೇಶ್ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದ ಸ್ಥೀತಿಯಲ್ಲಿದ್ದನು.
ಕೂಡಲೇ ಬಾಗಿಲು ಒಡೆದು ಒಳ ಪ್ರವೇಶಿಸಿ ನೇಣು ಬಿಗಿದ ವೇಲನ್ನು ಕತ್ತರಿಸಿ ಕೆಳಗೆ ಇಳಿಸಿದರೂ ಅದಾಗಲೇ ಜ್ಞಾನೇಶ ಮೃತಪಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ,
ಕಂಕನಾಡಿ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *