LATEST NEWS
ಮಂಗಳೂರು ಕರ್ಪ್ಯೂ ಮುಂದುವರಿಕೆ – ಸಂಪೂರ್ಣ ಸ್ತಬ್ದಗೊಂಡ ಮಂಗಳೂರು
ಮಂಗಳೂರು ಕರ್ಪ್ಯೂ ಮುಂದುವರಿಕೆ – ಸಂಪೂರ್ಣ ಸ್ತಬ್ದಗೊಂಡ ಮಂಗಳೂರು
ಮಂಗಳೂರು ಡಿಸೆಂಬರ್ 21: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಹಿಂಸಾಚಾರ ಭುಗಿಲೆದ್ದ ಕಾರಣ ಮಂಗಳೂರಿನಲ್ಲಿ ನಿನ್ನೆಯಿಂದ ಕರ್ಫ್ಯೂ ಜಾರಿಯಾಗಿದ್ದು. ಇಂದು ಕೂಡ ಮುಂದುವರೆದಿದೆ. ಇಡೀ ದಕ್ಷಿಣಕನ್ನಡ ಜಿಲ್ಲೆ ಕರ್ಪ್ಯೂನಿಂದಾಗಿ ಸ್ತಬ್ದವಾಗಿದೆ.
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆದ ಪ್ರತಿಭಟನೆ ಘರ್ಷಣೆ ನಂತರ ಮಂಗಳೂರು ನಗರದಾದ್ಯಂತ ಸೆಕ್ಷನ್ 144 ಅನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಬಹುತೇಕ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮಂಗಳೂರು ಸಂಪೂರ್ಣ ಶಾಂತವಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ಈ ಹಿನ್ನಲೆಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ 8ರ ವರೆಗೆ ಕರ್ಫ್ಯೂ ಸಡಿಲಗೊಳಿಸಲಾಗಿತ್ತು.
ಮುಂಜಾನೆಯೇ ಜನರು ಅಂಗಡಿ ಮುಂಗಟ್ಟುಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದು ಕಂಡುಬಂತು. ಹಾಲು, ತರಕಾರಿ, ರೇಷನ್ ಸೇರಿದಂತೆ ದಿನ ನಿತ್ಯದ ಅಗತ್ಯ ವಸ್ತುಗಳಿಗಾಗಿ ಜನ ಮುಗಿ ಬಿದ್ದಿದ್ದರು.
ಇನ್ನು ಕರ್ಫ್ಯೂ ಹಿನ್ನೆಲೆ ನಗರದಲ್ಲಿ ಬಿಗಿ ಪೋಲಿಸ್ ಭದ್ರತೆ ಇದ್ದು, 8 ಗಂಟೆಯ ನಂತರ ಇವತ್ತೂ ಕೂಡ ಕರ್ಫ್ಯೂ ಯಥಾಸ್ಥಿತಿಯಲ್ಲಿವೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜು, ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.
ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜು, ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಎಲ್ಲಾ ಮದ್ಯದಂಗಡಿ, ವೈನ್ಶಾಪ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಬಂದ್ ಮಾಡುವಂತೆ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
You must be logged in to post a comment Login