LATEST NEWS
ವಿಶ್ವವಿಖ್ಯಾತ ಮಂಗಳೂರು ದಸರಾಕ್ಕೆ ವೈಭವದ ಚಾಲನೆ…!!
ಮಂಗಳೂರು ಅಕ್ಟೋಬರ್ 07: ಮೈಸೂರು ದಸರಾ ನಂತರ ಅತಿ ಹೆಚ್ಚು ಪ್ರಖ್ಯಾತಿ ಹೊಂದಿರುವ ಮಂಗಳೂರು ದಸರಾಕ್ಕೆ ಇಂದು ವೈಭವದ ಚಾಲನೆ ನೀಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು. ಇಂದಿನಿಂದ ನಡೆಯಲಿರುವ ನವರಾತ್ರಿ ಉತ್ಸವದ ಅಂಗವಾಗಿ ಕುದ್ರೋಳಿ ಕ್ಷೇತ್ರದಲ್ಲಿ ನವ ದುರ್ಗೆಯರು, ಗಣಪತಿ ಹಾಗೂ ಶಾರದಾ ಮಾತೆಯ ವಿಗ್ರಹಗಳ ಪ್ರತಿಷ್ಠೆ ನಡೆಯಿತು.
ಕ್ಷೇತ್ರದ ಅಂಗಣದಲ್ಕಿ ದೇವರ ಮೂರ್ತಿಗಳ ಪ್ರದಕ್ಷಿಣೆ ನಡೆಸಿ ಬಳಿಕ ದಸರಾ ದರ್ಬಾರು ಮಂಟಪದಲ್ಲಿ ಮೂರ್ತಿಗಳ ಪ್ರತಿಷ್ಠೆ ಧಾರ್ಮಿಕ ವಿಧಿ ವಿಧಾನಗಳ ಮೂಲಕ ನಡೆಸಲಾಯಿತು.
You must be logged in to post a comment Login