Connect with us

    DAKSHINA KANNADA

    ಮಂಗಳೂರು: ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌, ಓರ್ವ ಮೃತ್ಯು, ಮತ್ತೋರ್ವನಿಗೆ ಗಾಯ

    ಮಂಗಳೂರು, ಆಗಸ್ಟ್ 12: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೋರ್ವ ಗಾಯಗೊಂಡಿದ್ದಾನೆ.

    ಬಿಹಾರ ಜಾಮೂಲ್ ನಿವಾಸಿ ವಿಕ್ಕಿ ಖಾನ್ (23) ಮೃತ ಕಾರ್ಮಿಕ, ಗಾಯಗೊಂಡವನನ್ನು ಗೋಪಾಲ್ ಪೂಜಾರಿ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ 7.15 ರ ಸುಮಾರಿಗೆ ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಹಣ್ಣು ತುಂಬಿದ್ದ ಪಿಕಪ್‌ ವಾಹನ ವೇಗವಾಗಿ ಬಂದು ಹೆದ್ದಾರಿ ಬದಿಯಲ್ಲಿ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದವರ ಮೇಲೆ ಹರಿದಿದೆ ಎಂದು ಸ್ಥಳೀಯರು ಹೇಳಿದ್ದಾರೆ.

    ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ಢಿಕ್ಕಿ ಹೊಡೆದ ಬೆನ್ನಲ್ಲೇ ವಾಹನವು ಪರಾರಿಯಾಗಿದೆ. ನಾಗುರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply