DAKSHINA KANNADA
ಮಂಗಳೂರು: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಮಂಗಳೂರು, ಜುಲೈ 08: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ನ ಕೃಷ್ಣಾಪುರ ಹಿಲ್ಸೈಡ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ಹಿಲ್ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಇವರು ಸುರತ್ಕಲ್ನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಫ್ತಾಬ್ ಮನೆಯಲ್ಲಿ ಸ್ನಾನಕ್ಕೆ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

ಅಫ್ತಾಬ್ ಅಸ್ಗರ್ ಅಲಿ ಅವರ ನಾಲ್ಕು ಮಕ್ಕಳಲ್ಲಿ ಏಕೈಕ ಪುತ್ರ. ಅವರ ಮೂವರು ಸಹೋದರಿಯರು ವಿವಾಹವಾಗಿದ್ದಾರೆ. ಅವರ ತಾಯಿ ಕೋವಿಡ್ ಸಮಯದಲ್ಲಿ ನಿಧನರಾಗಿದ್ದರು. ಅಂದಿನಿಂದ ತಂದೆ ಮತ್ತು ಮಗ ಮಾತ್ರ ಒಟ್ಟಿಗೆ ವಾಸಿಸುತ್ತಿದ್ದರು.
ಆಟೋ ರಿಕ್ಷಾ ಚಾಲಕರಾದ ಅಲಿ, ಮಧ್ಯಾಹ್ನದವರೆಗೂ ತಮ್ಮ ಮಗನೊಂದಿಗೆ ಮನೆಯಲ್ಲಿದ್ದರು. ಅವರು ಸುಮಾರು 1 ಗಂಟೆಗೆ ಕೆಲಸಕ್ಕೆ ಹೋದ ನಂತರ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.