LATEST NEWS
ತಂಗಿಯನ್ನು ಸೇಫ್ ಆಗಿ ರೈಲು ಹತ್ತಿಸಿ ಎಂದು ಎರಡು ಸಾವಿರ ಗೂಗಲ್ ಪೇ ಮಾಡಿದ್ದ ಅಕ್ಕ..ಆದರೂ ಬಿಡದ ಕೀಚಕರು

ಮಂಗಳೂರು ಎಪ್ರಿಲ್ 19: ಮುನ್ನೂರು ಗ್ರಾಮದ ನೇತ್ರಾವತಿ ನದಿ ತಟದ ಬಂಗ್ಲೆ ಹೌಸ್ ಬಳಿ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಪೊಲೀಸರು ಪಡೆದಿದ್ದಾರೆ. ಅತ್ಯಾಚಾರ ಕುರಿತಂತೆ ವೈದ್ಯಕೀಯ ವರದಿ ಇನ್ನೂ ಪೊಲೀಸರ ಕೈಸೇರಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಸಂತ್ರಸ್ಥೆ ಚೇತರಿಸಿಕೊಳ್ಳುತ್ತಿದ್ದು, ಇಲ್ಲಿಯವರೆಗೆ ಆಕೆಯ ಸಂಬಂಧಿಕರು ಮಂಗಳೂರಿಗೆ ಆಗಮಿಸಿಲ್ಲ ಎಂದು ಹೇಳಲಾಗಿದೆ.
ಇನ್ನು ಈ ಪ್ರಕರಣದಲ್ಲಿ ಸಾಮೂಹಿಕ ಅತ್ಯಾಚಾರಕ್ಕೀಡಾದ ಪಶ್ಚಿಮ ಬಂಗಾಳದ ಯುವತಿಯ ಅಕ್ಕ, ಆಟೊ ಚಾಲಕನಿಗೆ ₹2 ಸಾವಿರವನ್ನು ‘ಗೂಗಲ್ ಪೇ’ ಮೂಲಕ ಪಾವತಿಸಿ, ತಂಗಿಯನ್ನು ಸುರಕ್ಷಿತವಾಗಿ ರೈಲು ಹತ್ತಿಸುವಂತೆ ಕೇಳಿಕೊಂಡಿದ್ದಳು ಎಂಬುದು ತನಿಖೆ ವೇಳೆ ತಿಳಿದುಬಂದಿದೆ.

ಸಂತ್ರಸ್ತೆಯು ಸುಮಾರು 3 ತಿಂಗಳ ಹಿಂದೆ ಪ್ರಿಯತಮನ ಜತೆ ಕೇರಳದ ಕಡೆಗೆ ಕೆಲಸಕ್ಕೆ ಬಂದಿದ್ದಳು. ಆದರೆ ಎಪ್ರಿಲ್ 16 ರಂದು ಇಬ್ಬರ ನಡುವೆ ಜಗಳವಾಗಿತ್ತು, ಈ ಜಗಳದ ವೇಳೆ ಯುವತಿಯ ಗೆಳೆಯ ಆಕೆಯ ಮೊಬೈಲ್ ನ್ನು ಒಡೆದು ಹಾಕಿದ್ದ ಎನ್ನಲಾಗಿದೆ. ಅಲ್ಲದೆ ಆಕೆಯನ್ನು ಮನೆಯಿಂದ ಹೊರಹಾಕಿದ್ದ. ಈ ಹಿನ್ನಲೆ ಯುವತಿ ಕೇರಳದಿಂದ ಮಂಗಳೂರಿಗೆ ಬರುವ ರೈಲು ಹತ್ತಿದ್ದಳು. ಮಂಗಳೂರಿನಲ್ಲಿ ಇಳಿದ ಆಕೆ ಊರಿಗೆ ಹೋಗಲು ಹಣವಿಲ್ಲದೆ ಅಸಹಾಯಕಳಾಗಿದಳು ಈ ಬಗ್ಗೆ ಪ್ರಭುರಾಜ್ ಜೊತೆಗೆ ಸಹಾಯ ಕೇಳಿಕೊಂಡಿದ್ದಳು. ಅದನ್ನೇ ದುರ್ಬಳಕೆ ಮಾಡಿಕೊಂಡ ಆತ ಆಕೆಯ ಮೊಬೈಲ್ ರಿಪೇರಿ ಮಾಡಿ ಪಶ್ಚಿಮ ಬಂಗಾಳದಲ್ಲಿರುವ ಸಹೋದರಿಗೆ ಕರೆ ಮಾಡುವಂತೆ ತಿಳಿಸಿದ್ದ.ಪ್ರಿಯಕರನ ಬ್ಲ್ಯಾಕ್ಮೇಲ್ಗೆ ಬೇಸತ್ತು ಹಸೆಮಣೆ ಏರಬೇಕಿದ್ದ ಶಿಕ್ಷಕಿ ಆ*ತ್ಮಹ*ತ್ಯೆ
ತಂಗಿ ಊರಿಗೆ ಬರುವ ಇಂಗಿತ ವ್ಯಕ್ತಪಡಿಸುತ್ತಿದ್ದಂತೆ ಅಟೊ ರಿಕ್ಷಾ ಚಾಲಕನ ಸಹಾಯ ಯಾಚಿಸಿದ ಅಕ್ಕ, ₹2 ಸಾವಿರವನ್ನು ಗೂಗಲ್ ಪೇ ಮಾಡಿ ರೈಲು ಹತ್ತಿಸುವಂತೆ ತಿಳಿಸಿದ್ದಳು. ಪಶ್ಚಿಮ ಬಂಗಾಳದ ರೈಲು ತಡವಾಗಿದೆ ಎಂದು ನಂಬಿಸಿ ಸುಮಾರು 6 ಗಂಟೆ ರಿಕ್ಷಾದಲ್ಲೇ ಸುತ್ತಾಡಿಸಿ ಮತ್ತು ಬರುವ ಪಾನೀಯ ಕುಡಿಸಿ ತಡರಾತ್ರಿ ವೇಳೆ ಮೂವರು ಸೇರಿ ಅತ್ಯಾಚಾರವೆಸಗಿದ್ದಾರೆ ಎಂದು ತನಿಖೆ ವೇಳೆ ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.SSLC ಪಾಸ್ ಆದ್ರೆ ಲವ್ ಪಾಸ್: ಪಾಸ್ ಮಾಡಲು ಉತ್ತರ ಪತ್ರಿಕೆಯಲ್ಲಿ 500 ಇಟ್ಟ ವಿದ್ಯಾರ್ಥಿ!
ಆರೋಪಿ ಮಿಥುನ್ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ಇದೆ. ಡೆಲಿವರಿ ಬಾಯ್ ಮಣಿ ವಿರುದ್ಧ ಕಂಕನಾಡಿ ಠಾಣೆಯಲ್ಲಿ ಕಳವು ಪ್ರಕರಣ ಇದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಏ.25ರವರೆಗೆ ಪೊಲೀಸ್ ವಶಕ್ಕೆ ನೀಡಲಾಗಿದೆ. ‘ಸಂತ್ರಸ್ತೆ ಚೇತರಿಸಿಕೊಂಡಿದ್ದು, ಆಸ್ಪತ್ರೆ ಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಶುಕ್ರವಾರದ ಸಂಜೆವರೆಗೂ ಆಕೆಯ ಮನೆಯಿಂದ ಯಾರೂ ಬಂದಿಲ್ಲ. ಆಕೆಯನ್ನು ಊರಿನಿಂದ ಕರೆತಂದ ಪ್ರಿಯತಮನ ವಿಚಾರಣೆಯೂ ನಡೆದಿಲ್ಲ’ ಎಂದು ಮೂಲಗಳು ತಿಳಿಸಿವೆ.
2 Comments