Connect with us

    LATEST NEWS

    ಮಂಗಳೂರು – ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ಚೂರಿ ಇರಿತ

    ಮಂಗಳೂರು ಸೆಪ್ಟೆಂಬರ್ 03: ಕ್ಷುಲ್ಲಕ ಕಾರಣಕ್ಕೆ ವಕ್ತಿಯೊಬ್ಬನಿಗೆ ತಂಡವೊಂದು ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಎದುರುಪದವು ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.


    ಬಾಗಲಕೋಟೆ ಮೂಲದ ನಿಂಗಣ್ಣ ಚೂರಿ ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದಾರೆ. ಎದುರುಪದವು ನಿವಾಸಿ ದಿವಾಕರ್‌ ಯಾನೆ ದೀವ ತಂಡದಿಂದ ಈ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ. ಮದ್ಯಪಾನದ ಅಮಲಿನಲ್ಲಿ ನಿಂಗಣ್ಣ ಹಾಗೂ ತಂಡದೊಂದಿಗೆ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿ ಕೊನೆಗೆ ಚೂರಿ ಇರಿಯುವ ಹಂತಕ್ಕೆ ಹೋಗಿದೆ.

    ಚೂರಿ ಇರಿತದ ಪರಿಣಾಮ ನಿಂಗಣ್ಣ ತಲೆಗೆ ಗಂಭೀರ ಗಾಯವಾಗಿದ್ದು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾವೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply