KARNATAKA
ಲೋಕಾದ ಬಲೆಗೆ ಬಿದ್ದ ಮಂಗಳೂರು ಲೋಕೋಪಯೋಗಿ ಇಂಜಿನಿಯರ್..!
ಮಂಗಳೂರು: ಈ ಭ್ರಷಾಚಾರ ಅಂದ್ರೆ ಹಾಗೇನೆ.. ಇದಕ್ಕೆ ಜಾತಿ ಧರ್ಮ,ಬಣಗಳಿಲ್ಲ. ರಾಜಕಾರಣಿಗಳಿಂದ ಹಿಡಿದು ಅಧಿಕಾರಿ, ಗುಮಾಸ್ಥನವರೆಗೂ ಈ ಲಂಚದ ವ್ಯಾಧಿ ವ್ಯಾಪಿಸಿದೆ, ಭಿಕ್ಷೆ ಬೇಡಿ ತಿಂದ್ರೂ ಆಗಬಹುದು ಆದ್ರೆ ಅವನಿಗಿಂದ ಕೆಳಕ್ಕೆ ಬಹುಷ ಅಗತ್ಯ ಇದ್ರೆ ಭಿಕ್ಷುಕರನ್ನೂ ಈ ಲಂಚ ಕೋರರರು ಬಿಡಕಿಲ್ಲ.
ಇದೀಗ ಮಂಗಳೂರು ನಗರದ ಬೋಂದೆಲ್ ನಲ್ಲಿರುವ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಒಬ್ಬ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾನೆ.
ಕಿರಿಯ ಇಂಜಿನಿಯರ್ ರೊನಾಲ್ಡ್ ಲೋಬೋ ಗುತ್ತಿಗೆದಾರರೊಬ್ಬರಿಂದ ಲಂಚಕ್ಕೆ ಕೈಯೊಡ್ಡುವಾಗ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ.
ಲೋಕೋಪಯೋಗಿ ಇಲಾಖೆಯ ಕ್ಲಾಸ್ 2 ದರ್ಜೆಯ ಗುತ್ರಿಗೆದಾರ ಪ್ರಭಾಕರ ನಾಯ್ಕ ಬೆಳ್ತಂಗಡಿ ತಾಲೂಕಿನ ಎರಡು ಗ್ರಾಮಗಳಲ್ಲಿ 45 ಲಕ್ಷ ರೂ. ವೆಚ್ಚದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲನಿಯ ಅಭಿವೃದ್ಧಿ ಕಾಮಗಾರಿ ಮಾಡಿಸಿದ್ದರು.
ಈ ಬಗ್ಗೆ ವರದಿ ಮಾಡಲು ಲೋಕೋಪಯೋಗಿ ಇಲಾಖೆಗೆ ಅರ್ಜಿ ಸಲ್ಲಿಸಿದಾಗ ಇಲಾಖೆಯ ಗುಣಮಟ್ಟ ಮತ್ತು ಭರವಸೆ ವಿಭಾಗದ ಇಂಜಿನಿಯರ್ ರೊನಾಲ್ಡ್ ಲೋಬೋ 22 ಸಾವಿರ ರೂ. ಲಂಚ ಕೇಳಿದ್ದರೆನ್ನಲಾಗಿದೆ.
ಆದರೆ ಲಂಚ ಕೊಡಲು ನಿರಾಕರಿಸಿದ ಪ್ರಭಾಕರ ನಾಯ್ಕ ನೇರ ಲೋಕಾಯುಕ್ತ ಪೊಲೀಸ್ಗೆ ದೂರು ನೀಡಿದ್ದರು.
ಲೋಕಾಯುಕ್ತ ಎಸ್ಪಿ ಸಿ.ಎ.ಸೈಮನ್ ಮಾರ್ಗದರ್ಶನದಂತೆ ಬುಧವಾರ ಲಂಚದ ಹಣ ಸ್ವೀಕರಿಸುವ ವೇಳೆ ದಾಳಿ ನಡೆಸಿ ರೊನಾಲ್ಡ್ ಲೋಬೋನನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೋಲಿಸರು ಮಾಹಿತಿ ನೀಡಿದ್ದಾರೆ.
You must be logged in to post a comment Login