LATEST NEWS
ಮಂಗಳೂರು – ಮಾಣಿ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ
ಮಂಗಳೂರ ಮೇ 25: ಕಾಂಗ್ರೇಸ್ ಕಾರ್ಯಕರ್ತರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ನಿನ್ನೆ ಮಾಣಿ ಎಂಬಲ್ಲಿ ಓಮ್ನಿ ಕಾರಿನಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತರು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ಭಜರಂಗದಳ ಕಾರ್ಯಕರ್ತ ಮಹೇಂದ್ರ ಎಂಬವನಿಗೆ ಡಿಕ್ಕಿ ಹೊಡೆದು ಬಳಿಕ ಕಟ್ಟಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು, ಗಂಭೀರವಾಗಿ ಹಲ್ಲೆಗೊಳಗಾದ ಮಹೇಂದ್ರ ಆತನ ಸ್ನೇಹಿತ ಪ್ರಶಾಂತ್ ನಾಯ್ಕ್ ಅವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು.
ಆಸ್ಪತ್ರೆಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಹಲ್ಲೆಗೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.
You must be logged in to post a comment Login